24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ ಆಟಿಕೂಟಕ್ಕೆ ಚಾಲನೆ ನೀಡಿದರು.

ನಂತರ ಆಟಿಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಹಿಳಾ ವೇದಿಕೆಯ ಸದಸ್ಯರಾದಂತಹ ವಿದ್ಯಾಶ್ರೀ ಅಡೂರ್ ಅವರು ಸ್ಪರ್ಧೆಗಳನ್ನು ನಿರ್ವಹಿಸಿದರು. ಮಹಿಳಾ ವೇದಿಕೆಯ ಅನೇಕ ಸದಸ್ಯರು ತುಳುನಾಡಿನ ಖಾದ್ಯಗಳನ್ನು ತಮ್ಮ ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಕಾರ್ಯಕ್ರಮದಲ್ಲಿ ಹಂಚಿಕೊಂಡು ತಿಂದು,ತಿನಿಸಿ ಸಂಭ್ರಮ ಪಟ್ಟರು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಜಯಂತಿ ಪುರಂದರ್,ಕೇಂದ್ರ ಖಜಾಂಜಿ ವಾಸುದೇವ ಸೋಮಯಾಜಿ,ಮಹಿಳಾ ವೇದಿಕೆಯ ಅಧ್ಯಕ್ಷೆ ನಳಿನಿ ಹೊಳ್ಳ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇಂದಿರಾ ಹೊಳ್ಳ ಪ್ರಾರ್ಥನೆ ಹಾಡಿದರು.ಸುಜಾತ ರಾವ್ ಸ್ವಾಗತಿಸಿದರು,ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ನಿರೂಪಿಸಿದರು. ಗೀತಾ ವಿ ರಾವ್ ಆಟಿಯ ಮಹತ್ವವನ್ನ ವಿವರಿಸಿದರು.ಅಖಿಲ ಪ್ರಕಾಶ್ ನಾರಾಯಣ್ ಖಾದ್ಯಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಓದಿ,ಆಶಾ ಅಡೂರ್ ವಂದಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಕೂಟ ಮಹಾಜಗತ್ತಿನ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya
error: Content is protected !!