July 23, 2026
ಸಂಘ-ಸಂಸ್ಥೆಗಳು

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

ಬೆಳ್ತಂಗಡಿ:ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯ ವತಿಯಿಂದ ಆ.4 ರಂದು ಉಜಿರೆಯ ಅರಿಪಾಡಿ ಮಠದ ಕಲಾವೇದಿಕೆಯಲ್ಲಿ ಆಟಿಕೂಟವನ್ನು ಹಮ್ಮಿಕೊಳ್ಳಲಾಯಿತು.

ಬೆಳ್ತಂಗಡಿ ಕೂಟ ಮಹಾ ಜಗತ್ತಿನ ಅಧ್ಯಕ್ಷ ವಿಶ್ವನಾಥ ಹೊಳ್ಳರವರು ದೀಪ ಬೆಳಗಿಸಿ ಆಟಿಕೂಟಕ್ಕೆ ಚಾಲನೆ ನೀಡಿದರು.

ನಂತರ ಆಟಿಕೂಟದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಹಿಳಾ ವೇದಿಕೆಯ ಸದಸ್ಯರಾದಂತಹ ವಿದ್ಯಾಶ್ರೀ ಅಡೂರ್ ಅವರು ಸ್ಪರ್ಧೆಗಳನ್ನು ನಿರ್ವಹಿಸಿದರು. ಮಹಿಳಾ ವೇದಿಕೆಯ ಅನೇಕ ಸದಸ್ಯರು ತುಳುನಾಡಿನ ಖಾದ್ಯಗಳನ್ನು ತಮ್ಮ ತಮ್ಮ ಮನೆಗಳಲ್ಲಿ ತಯಾರಿಸಿ ತಂದು ಕಾರ್ಯಕ್ರಮದಲ್ಲಿ ಹಂಚಿಕೊಂಡು ತಿಂದು,ತಿನಿಸಿ ಸಂಭ್ರಮ ಪಟ್ಟರು.

ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಶ್ವನಾಥ ಹೊಳ್ಳ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಜಯಂತಿ ಪುರಂದರ್,ಕೇಂದ್ರ ಖಜಾಂಜಿ ವಾಸುದೇವ ಸೋಮಯಾಜಿ,ಮಹಿಳಾ ವೇದಿಕೆಯ ಅಧ್ಯಕ್ಷೆ ನಳಿನಿ ಹೊಳ್ಳ ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇಂದಿರಾ ಹೊಳ್ಳ ಪ್ರಾರ್ಥನೆ ಹಾಡಿದರು.ಸುಜಾತ ರಾವ್ ಸ್ವಾಗತಿಸಿದರು,ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ನಿರೂಪಿಸಿದರು.ಗೀತಾ ವಿ ಸೋಮಯಾಜಿ ಆಟಿಯ ಮಹತ್ವವನ್ನ ವಿವರಿಸಿದರು.ಅಖಿಲ ಪ್ರಕಾಶ್ ನಾರಾಯಣ್ ಖಾದ್ಯಗಳನ್ನು ತಯಾರಿಸಿ ತಂದವರ ಪಟ್ಟಿಯನ್ನು ಓದಿ,ಆಶಾ ಅಡೂರ್ ವಂದಿಸಿದರು

ಹೆಚ್ಚಿನ ಸಂಖ್ಯೆಯಲ್ಲಿ ಕೂಟ ಮಹಾಜಗತ್ತಿನ ಪುರುಷರು, ಮಹಿಳೆಯರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!