23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಆ. 03 ರಂದು ನಡೆಯಿತು.

ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ಶಿಕ್ಷಕ – ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಜಾತ, ಉಪಾಧ್ಯಕ್ಷರಾಗಿ ವಸಂತ ಮತ್ತು ಭಾಗ್ಯ, ಕೋಶಾಧಿಕಾರಿಯಾಗಿ ಮುರಳಿ ಕೃಷ್ಣ ಭಟ್, ಕಾರ್ಯದರ್ಶಿಯಾಗಿ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಹಾಗೂ 10 ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಹಾಗೆ ಮೊಬೈಲ್ ಬಳಕೆಯ ದುರುಪಯೋಗದ ಬಗ್ಗೆ ಮನವರಿಕೆ ಮಾಡಿದರು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದಂತಹ ಕುಂಭಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಿರೀಶ್ ಕೆ.ಎಚ್ ಹಾಡಿನ ಮೂಲಕ ಪೋಷಕರು ಮತ್ತು ಶಿಕ್ಷಕರ ಕರ್ತವ್ಯವನ್ನು ತಿಳಿಸಿದರು. ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಕುಮಾರಿ ಪ್ರಾಸ್ತವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಯನ್ನು ತಿಳಿಸಿದರು. ಸತತ 11ನೇ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ನೂರು ಶೇಕಡ ಫಲಿತಾಂಶವನ್ನು ಪಡೆದಿದ್ದು, ಕಳೆದ ವರ್ಷ ಎಸ್ ಎಸ್ ಎಲ್ ಸಿ ಗೆ ಬೋಧಿಸಿದಂತಹ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು.

ಸಭೆಯಲ್ಲಿ ಕುಂಭಶ್ರೀ ವೈಭವ ಸಮಿತಿಯ ಮಾಜಿ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಜಗದೀಶ್ ಮತ್ತು ಗಣೇಶ್ ಕುಂದರ್ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಗೌತಮಿ ಹಾಗೂ ಶ್ವೇತಾ ಅಶೋಕ್ ನಿರೂಪಿಸಿ , ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ವಂದಿಸಿದರು.

Related posts

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya
error: Content is protected !!