24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಆ. 03 ರಂದು ನಡೆಯಿತು.

ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ಶಿಕ್ಷಕ – ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಜಾತ, ಉಪಾಧ್ಯಕ್ಷರಾಗಿ ವಸಂತ ಮತ್ತು ಭಾಗ್ಯ, ಕೋಶಾಧಿಕಾರಿಯಾಗಿ ಮುರಳಿ ಕೃಷ್ಣ ಭಟ್, ಕಾರ್ಯದರ್ಶಿಯಾಗಿ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಹಾಗೂ 10 ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಹಾಗೆ ಮೊಬೈಲ್ ಬಳಕೆಯ ದುರುಪಯೋಗದ ಬಗ್ಗೆ ಮನವರಿಕೆ ಮಾಡಿದರು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದಂತಹ ಕುಂಭಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಿರೀಶ್ ಕೆ.ಎಚ್ ಹಾಡಿನ ಮೂಲಕ ಪೋಷಕರು ಮತ್ತು ಶಿಕ್ಷಕರ ಕರ್ತವ್ಯವನ್ನು ತಿಳಿಸಿದರು. ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಕುಮಾರಿ ಪ್ರಾಸ್ತವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಯನ್ನು ತಿಳಿಸಿದರು. ಸತತ 11ನೇ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ನೂರು ಶೇಕಡ ಫಲಿತಾಂಶವನ್ನು ಪಡೆದಿದ್ದು, ಕಳೆದ ವರ್ಷ ಎಸ್ ಎಸ್ ಎಲ್ ಸಿ ಗೆ ಬೋಧಿಸಿದಂತಹ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು.

ಸಭೆಯಲ್ಲಿ ಕುಂಭಶ್ರೀ ವೈಭವ ಸಮಿತಿಯ ಮಾಜಿ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಜಗದೀಶ್ ಮತ್ತು ಗಣೇಶ್ ಕುಂದರ್ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಗೌತಮಿ ಹಾಗೂ ಶ್ವೇತಾ ಅಶೋಕ್ ನಿರೂಪಿಸಿ , ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ವಂದಿಸಿದರು.

Related posts

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!