25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ 2024-25ನೇ ಸಾಲಿನ ಶಿಕ್ಷಕ – ರಕ್ಷಕ ಸಂಘದ ಸಭೆಯು ಆ. 03 ರಂದು ನಡೆಯಿತು.

ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶಾಲಾ ಶಿಕ್ಷಕ – ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಜಾತ, ಉಪಾಧ್ಯಕ್ಷರಾಗಿ ವಸಂತ ಮತ್ತು ಭಾಗ್ಯ, ಕೋಶಾಧಿಕಾರಿಯಾಗಿ ಮುರಳಿ ಕೃಷ್ಣ ಭಟ್, ಕಾರ್ಯದರ್ಶಿಯಾಗಿ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತ ಹಾಗೂ 10 ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಶಾಲಾ ಸಂಚಾಲಕರಾದ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಹಾಗೆ ಮೊಬೈಲ್ ಬಳಕೆಯ ದುರುಪಯೋಗದ ಬಗ್ಗೆ ಮನವರಿಕೆ ಮಾಡಿದರು. ಈ ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿದಂತಹ ಕುಂಭಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಿರೀಶ್ ಕೆ.ಎಚ್ ಹಾಡಿನ ಮೂಲಕ ಪೋಷಕರು ಮತ್ತು ಶಿಕ್ಷಕರ ಕರ್ತವ್ಯವನ್ನು ತಿಳಿಸಿದರು. ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಕುಮಾರಿ ಪ್ರಾಸ್ತವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಯನ್ನು ತಿಳಿಸಿದರು. ಸತತ 11ನೇ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ನೂರು ಶೇಕಡ ಫಲಿತಾಂಶವನ್ನು ಪಡೆದಿದ್ದು, ಕಳೆದ ವರ್ಷ ಎಸ್ ಎಸ್ ಎಲ್ ಸಿ ಗೆ ಬೋಧಿಸಿದಂತಹ ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಲಾಯಿತು.

ಸಭೆಯಲ್ಲಿ ಕುಂಭಶ್ರೀ ವೈಭವ ಸಮಿತಿಯ ಮಾಜಿ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ಜಗದೀಶ್ ಮತ್ತು ಗಣೇಶ್ ಕುಂದರ್ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು. ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಅಕ್ಷತ ಸ್ವಾಗತಿಸಿ, ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಗೌತಮಿ ಹಾಗೂ ಶ್ವೇತಾ ಅಶೋಕ್ ನಿರೂಪಿಸಿ , ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ವಂದಿಸಿದರು.

Related posts

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya
error: Content is protected !!