23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಆ.3 ರಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಶಿಕ್ಷಕ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭವಾಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳಿಗೆ ತಂದೆ, ತಾಯಿ ಮತ್ತು ಗುರು ಇವರೆಲ್ಲರೂ ಪ್ರಮುಖವಾದವರು, ನಿಮ್ಮ ವಿಶ್ವಾಸವನ್ನು ನಮ್ಮ ಕೈಲಾದಷ್ಟು ಮಟ್ಟಿಗೆ ನೆರವೇರಿಸುತ್ತೇವೆ ಎಂದು ಭರವಸೆಯನ್ನು ನೀಡಿ, ಮಕ್ಕಳಿಗೆ ಪರಸ್ಪರ ಪ್ರೀತಿಸುವ, ಗೌರವಿಸುವ ತರಬೇತಿಯನ್ನು ಹೆತ್ತವರು ನೀಡಬೇಕೆಂದು ಹೇಳಿದರು.

ಸಭೆಗೆ ಸಂಪನ್ಮೂಲ ವ್ಯಕ್ತಿಗಳಾಗಿ ಸಹ ಪ್ರಾಧ್ಯಾಪಕರು, ಮಕ್ಕಳ ವಿಭಾಗ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿಯ ಡಾ| ಚಂದನಾ ಪೈರವರು ಆಗಮಿಸಿ “ಮಕ್ಕಳ ಆರೋಗ್ಯ, ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು. ಶ್ರೀಮತಿ ಟ್ರೆಸ್ಸಿ ಲೋಬೋ ರವರು ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಸಭೆಗೆ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ಶಾಲಾ ನಿಯಮಗಳು ಹಾಗೂ ಹೆತ್ತವರ ಸಲಹೆ ಸೂಚನೆಗಳಿಗೆ ಉತ್ತರವನ್ನು ನೀಡಿದರು.

ಶಿಕ್ಷಕ-ರಕ್ಷಕ ಎಲ್ಲಾ ಮಾಜಿ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಧನ್ಯವಾದಗಳನ್ನು ಅರ್ಪಿಸಲಾಯಿತು. 2024-25ನೇ ಶೈಕ್ಷಣಿಕ ಸಾಲಿನ ಪದಾಧಿಕಾರಿಗಳ ಚುನಾವಣೆಯನ್ನು ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ನೆರವೇರಿಸಿ ನಂತರ ದೀಪ ಬೆಳಗಿಸುವುದರ ಮೂಲಕ 2024-25 ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷರಕ್ಷಕ ಸಂಘವನ್ನು ಉದ್ಘಾಟಿಸಲಾಯಿತು. ಎರಡನೇ ಬಾರಿಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ವಿನಯ್ ಡಿಸೋಜ ರವರು ಮಾತನಾಡಿ ಶಾಲೆಯ ಏಳಿಗೆಗೆ ಶ್ರಮಿಸುವುದಾಗಿ ಭರವಸೆಯನ್ನಿತ್ತರು. ನೂತನವಾಗಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಗಿಡವನ್ನು ನೀಡುವುದರ ಮೂಲಕ ಅಭಿನಂದಿಸಲಾಯಿತು.

ಶಾಲಾ ಸಹಶಿಕ್ಷಕಿಯರಾದ ಶ್ರೀಮತಿ ರಮ್ಯಾಲತಾ ಮತ್ತು ಶೀಮತಿ ಸವಿತಾ ರವರು ಶೈಕ್ಷಣಿಕ ವರ್ಷದ ಸಭೆಯ ವರದಿಯನ್ನು ಮಂಡಿಸಿದರು. ಸಹ ಶಿಕ್ಷಕಿಯಾದ ಶೀಮತಿ ಎಲಿಜಾ ಶಾಂತಿರವರು ಶೈಕ್ಷಣಿಕ ಸಾಲಿನ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಐಡ ಡಿಕುನ್ಹಾ ಮತ್ತು ಶ್ರೀಮತಿ ಮಮತಾರವರು ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ವಿನ್ನಿ ಲೋಬೋ ರವರು ಸ್ವಾಗತಿಸಿ, ಕುಮಾರಿ ಜುವರಿಯರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!