July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು.

2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ ಶಾಮಿಯಾನದ ಮಾಲಕ ಕಳಿಯ ಗ್ರಾಮ ಪಂಚಾಯತ್‌ ಸದಸ್ಯ ಬಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಭಾರತ್ ಶಾಮಿಯಾನದ ಧರ್ಣಪ್ಪ ಮೂಲ್ಯ ನಾವೂರು, ಕೋಶಾಧಿಕಾರಿ ಕಾಯರ್ತಡ್ಕ ಅಭಿಲಾಷ್ ಶಾಮಿಯಾನದ ಜೋಸೆಫ್ ಕೆ.ಡಿ. ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಅರುಣ್ ಮೊರಾಸ್ (ಎಸ್.ಪಿ.ಎಸ್. ಶಾಮಿಯಾನ ಮಡಂತ್ಯಾರು), ರಾಜೇಂದ್ರ ಕುಮಾರ್ (ಎಸ್.ಆರ್. ಶಾಮಿಯಾನ ವೇಣೂರು), ಜೊತೆ ಕಾರ್ಯದರ್ಶಿ ಕೆ.ಎಂ. ಹಕೀಮ್ (ತನಲ್ ಇವೆಂಟ್ ಸರಳಿಕಟ್ಟೆ), ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ್ ಕುಮಾರ್ (ಶ್ರೀ ದೇವಿ ಶಾಮಿಯಾನ ಎಸ್.ಎಮ್), ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ (ಎ.ಕೆ.ಎ. ಶಾಮಿಯಾನ ಕಕ್ಕಿಂಜೆ) ಆಯ್ಕೆಯಾದರು. ತಾಲೂಕಿನ ಎಲ್ಲ ವಲಯಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ವಲಯ- ಅವಿಲ್ ಡೇಸಾ ಬಂಗಾಡಿ, ಉಮೇಶ್ ಗೌಡ, ಕಕ್ಕಿಂಜೆ -ತಿರುಮಲೇಶ್, ಧರ್ಮಸ್ಥಳ ಸುಮಿತ್ರಾ, ಗೇರುಕಟ್ಟೆ -ಸುರೇಶ್ ಶ್ರೀ ದೇವಿ ಕೃಪಾ, ಕಲ್ಲೇರಿ – ಬಾಲಕೃಷ್ಣ ಶೆಟ್ಟಿ, ವೇಣೂರು -ಜಿನರಾಜ್ ಜೈನ್, ಅಳದಂಗಡಿ , ಪ್ರಭಾಕರ್ ಕುಲಾಲ್, ಸುಲ್ಕೇರಿ -ವಿಜೇತ್, ಮಡಂತ್ಯಾರು -ಲೆಸ್ಲಿ ಡಿಸೋಜ, ಅರಸಿನಮಕ್ಕಿ – ಅಶ್ವಥ್ ನಿಡ್ಲೆ ಆಯ್ಕೆಯಾದರು.

Related posts

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya
error: Content is protected !!