25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

ಉಜಿರೆ: ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳ ಕುರಿತು ಕಾರ್ಯಾಗಾರವನ್ನು ಆ. 3ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಎಸ್.ಡಿ.ಎಂ ಕಾಲೇಜಿನ ಮನಃಶಾಸ್ತ್ರದ ಪ್ರಾಧ್ಯಾಪಕರಾಗಿರುವ ಡಾ. ಸುಧೀರ್‌ ಕೆ.ವಿ. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಇವರು ವಿದ್ಯಾರ್ಥಿಗಳಿಗೆ ಅನೇಕ ಆಸಕ್ತಿದಾಯಕ ಚಟುವಟಿಕೆಗಳನ್ನು ನೀಡುವ ಮೂಲಕ ವ್ಯಕ್ತಿತ್ವ ವಿಕಸನಗೊಳಿಸುವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಕಲೆಯನ್ನು ತಿಳಿಸಿಕೊಟ್ಟರು. ಧನಾತ್ಮಕ ಚಿಂತನೆ ಇದ್ದರೆ ಬದುಕನ್ನು ಯೋಗ್ಯ ರೀತಿಯಲ್ಲಿ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕರಾದ ವಿಜ್ಞಾನ ವಿಭಾಗದ ಮುಖ್ಯಸ್ಥ ರಾಜೇಶ್‌ ಕೆ ಎ, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕ ಶಂಕರ್‌ ಭಟ್‌ ಎಚ್‌ ಆರ್‌ ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧ ಆಯ್ಕೆ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!