30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

ಉಜಿರೆ: ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳ ಕುರಿತು ಕಾರ್ಯಾಗಾರವನ್ನು ಆ. 3ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಎಸ್.ಡಿ.ಎಂ ಕಾಲೇಜಿನ ಮನಃಶಾಸ್ತ್ರದ ಪ್ರಾಧ್ಯಾಪಕರಾಗಿರುವ ಡಾ. ಸುಧೀರ್‌ ಕೆ.ವಿ. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಇವರು ವಿದ್ಯಾರ್ಥಿಗಳಿಗೆ ಅನೇಕ ಆಸಕ್ತಿದಾಯಕ ಚಟುವಟಿಕೆಗಳನ್ನು ನೀಡುವ ಮೂಲಕ ವ್ಯಕ್ತಿತ್ವ ವಿಕಸನಗೊಳಿಸುವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಕಲೆಯನ್ನು ತಿಳಿಸಿಕೊಟ್ಟರು. ಧನಾತ್ಮಕ ಚಿಂತನೆ ಇದ್ದರೆ ಬದುಕನ್ನು ಯೋಗ್ಯ ರೀತಿಯಲ್ಲಿ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕರಾದ ವಿಜ್ಞಾನ ವಿಭಾಗದ ಮುಖ್ಯಸ್ಥ ರಾಜೇಶ್‌ ಕೆ ಎ, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕ ಶಂಕರ್‌ ಭಟ್‌ ಎಚ್‌ ಆರ್‌ ಕಾರ್ಯಕ್ರಮ ನಿರೂಪಿಸಿದರು.

Related posts

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya
error: Content is protected !!