July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

ಉಜಿರೆ: ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳ ಕುರಿತು ಕಾರ್ಯಾಗಾರವನ್ನು ಆ. 3ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಎಸ್.ಡಿ.ಎಂ ಕಾಲೇಜಿನ ಮನಃಶಾಸ್ತ್ರದ ಪ್ರಾಧ್ಯಾಪಕರಾಗಿರುವ ಡಾ. ಸುಧೀರ್‌ ಕೆ.ವಿ. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ಇವರು ವಿದ್ಯಾರ್ಥಿಗಳಿಗೆ ಅನೇಕ ಆಸಕ್ತಿದಾಯಕ ಚಟುವಟಿಕೆಗಳನ್ನು ನೀಡುವ ಮೂಲಕ ವ್ಯಕ್ತಿತ್ವ ವಿಕಸನಗೊಳಿಸುವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಕಲೆಯನ್ನು ತಿಳಿಸಿಕೊಟ್ಟರು. ಧನಾತ್ಮಕ ಚಿಂತನೆ ಇದ್ದರೆ ಬದುಕನ್ನು ಯೋಗ್ಯ ರೀತಿಯಲ್ಲಿ ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಸಂಯೋಜಕರಾದ ವಿಜ್ಞಾನ ವಿಭಾಗದ ಮುಖ್ಯಸ್ಥ ರಾಜೇಶ್‌ ಕೆ ಎ, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆಂಗ್ಲಭಾಷಾ ಉಪನ್ಯಾಸಕ ಶಂಕರ್‌ ಭಟ್‌ ಎಚ್‌ ಆರ್‌ ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya
error: Content is protected !!