39.6 C
ಪುತ್ತೂರು, ಬೆಳ್ತಂಗಡಿ
March 31, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು.

2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ ಶಾಮಿಯಾನದ ಮಾಲಕ ಕಳಿಯ ಗ್ರಾಮ ಪಂಚಾಯತ್‌ ಸದಸ್ಯ ಬಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಭಾರತ್ ಶಾಮಿಯಾನದ ಧರ್ಣಪ್ಪ ಮೂಲ್ಯ ನಾವೂರು, ಕೋಶಾಧಿಕಾರಿ ಕಾಯರ್ತಡ್ಕ ಅಭಿಲಾಷ್ ಶಾಮಿಯಾನದ ಜೋಸೆಫ್ ಕೆ.ಡಿ. ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಅರುಣ್ ಮೊರಾಸ್ (ಎಸ್.ಪಿ.ಎಸ್. ಶಾಮಿಯಾನ ಮಡಂತ್ಯಾರು), ರಾಜೇಂದ್ರ ಕುಮಾರ್ (ಎಸ್.ಆರ್. ಶಾಮಿಯಾನ ವೇಣೂರು), ಜೊತೆ ಕಾರ್ಯದರ್ಶಿ ಕೆ.ಎಂ. ಹಕೀಮ್ (ತನಲ್ ಇವೆಂಟ್ ಸರಳಿಕಟ್ಟೆ), ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ್ ಕುಮಾರ್ (ಶ್ರೀ ದೇವಿ ಶಾಮಿಯಾನ ಎಸ್.ಎಮ್), ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ (ಎ.ಕೆ.ಎ. ಶಾಮಿಯಾನ ಕಕ್ಕಿಂಜೆ) ಆಯ್ಕೆಯಾದರು. ತಾಲೂಕಿನ ಎಲ್ಲ ವಲಯಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ವಲಯ- ಅವಿಲ್ ಡೇಸಾ ಬಂಗಾಡಿ, ಉಮೇಶ್ ಗೌಡ, ಕಕ್ಕಿಂಜೆ -ತಿರುಮಲೇಶ್, ಧರ್ಮಸ್ಥಳ ಸುಮಿತ್ರಾ, ಗೇರುಕಟ್ಟೆ -ಸುರೇಶ್ ಶ್ರೀ ದೇವಿ ಕೃಪಾ, ಕಲ್ಲೇರಿ – ಬಾಲಕೃಷ್ಣ ಶೆಟ್ಟಿ, ವೇಣೂರು -ಜಿನರಾಜ್ ಜೈನ್, ಅಳದಂಗಡಿ , ಪ್ರಭಾಕರ್ ಕುಲಾಲ್, ಸುಲ್ಕೇರಿ -ವಿಜೇತ್, ಮಡಂತ್ಯಾರು -ಲೆಸ್ಲಿ ಡಿಸೋಜ, ಅರಸಿನಮಕ್ಕಿ – ಅಶ್ವಥ್ ನಿಡ್ಲೆ ಆಯ್ಕೆಯಾದರು.

Related posts

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya
error: Content is protected !!