25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು.

2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ ಶಾಮಿಯಾನದ ಮಾಲಕ ಕಳಿಯ ಗ್ರಾಮ ಪಂಚಾಯತ್‌ ಸದಸ್ಯ ಬಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಭಾರತ್ ಶಾಮಿಯಾನದ ಧರ್ಣಪ್ಪ ಮೂಲ್ಯ ನಾವೂರು, ಕೋಶಾಧಿಕಾರಿ ಕಾಯರ್ತಡ್ಕ ಅಭಿಲಾಷ್ ಶಾಮಿಯಾನದ ಜೋಸೆಫ್ ಕೆ.ಡಿ. ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಅರುಣ್ ಮೊರಾಸ್ (ಎಸ್.ಪಿ.ಎಸ್. ಶಾಮಿಯಾನ ಮಡಂತ್ಯಾರು), ರಾಜೇಂದ್ರ ಕುಮಾರ್ (ಎಸ್.ಆರ್. ಶಾಮಿಯಾನ ವೇಣೂರು), ಜೊತೆ ಕಾರ್ಯದರ್ಶಿ ಕೆ.ಎಂ. ಹಕೀಮ್ (ತನಲ್ ಇವೆಂಟ್ ಸರಳಿಕಟ್ಟೆ), ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ್ ಕುಮಾರ್ (ಶ್ರೀ ದೇವಿ ಶಾಮಿಯಾನ ಎಸ್.ಎಮ್), ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ (ಎ.ಕೆ.ಎ. ಶಾಮಿಯಾನ ಕಕ್ಕಿಂಜೆ) ಆಯ್ಕೆಯಾದರು. ತಾಲೂಕಿನ ಎಲ್ಲ ವಲಯಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ವಲಯ- ಅವಿಲ್ ಡೇಸಾ ಬಂಗಾಡಿ, ಉಮೇಶ್ ಗೌಡ, ಕಕ್ಕಿಂಜೆ -ತಿರುಮಲೇಶ್, ಧರ್ಮಸ್ಥಳ ಸುಮಿತ್ರಾ, ಗೇರುಕಟ್ಟೆ -ಸುರೇಶ್ ಶ್ರೀ ದೇವಿ ಕೃಪಾ, ಕಲ್ಲೇರಿ – ಬಾಲಕೃಷ್ಣ ಶೆಟ್ಟಿ, ವೇಣೂರು -ಜಿನರಾಜ್ ಜೈನ್, ಅಳದಂಗಡಿ , ಪ್ರಭಾಕರ್ ಕುಲಾಲ್, ಸುಲ್ಕೇರಿ -ವಿಜೇತ್, ಮಡಂತ್ಯಾರು -ಲೆಸ್ಲಿ ಡಿಸೋಜ, ಅರಸಿನಮಕ್ಕಿ – ಅಶ್ವಥ್ ನಿಡ್ಲೆ ಆಯ್ಕೆಯಾದರು.

Related posts

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya
error: Content is protected !!