23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು.

2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ ಶಾಮಿಯಾನದ ಮಾಲಕ ಕಳಿಯ ಗ್ರಾಮ ಪಂಚಾಯತ್‌ ಸದಸ್ಯ ಬಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಭಾರತ್ ಶಾಮಿಯಾನದ ಧರ್ಣಪ್ಪ ಮೂಲ್ಯ ನಾವೂರು, ಕೋಶಾಧಿಕಾರಿ ಕಾಯರ್ತಡ್ಕ ಅಭಿಲಾಷ್ ಶಾಮಿಯಾನದ ಜೋಸೆಫ್ ಕೆ.ಡಿ. ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಅರುಣ್ ಮೊರಾಸ್ (ಎಸ್.ಪಿ.ಎಸ್. ಶಾಮಿಯಾನ ಮಡಂತ್ಯಾರು), ರಾಜೇಂದ್ರ ಕುಮಾರ್ (ಎಸ್.ಆರ್. ಶಾಮಿಯಾನ ವೇಣೂರು), ಜೊತೆ ಕಾರ್ಯದರ್ಶಿ ಕೆ.ಎಂ. ಹಕೀಮ್ (ತನಲ್ ಇವೆಂಟ್ ಸರಳಿಕಟ್ಟೆ), ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ್ ಕುಮಾರ್ (ಶ್ರೀ ದೇವಿ ಶಾಮಿಯಾನ ಎಸ್.ಎಮ್), ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ (ಎ.ಕೆ.ಎ. ಶಾಮಿಯಾನ ಕಕ್ಕಿಂಜೆ) ಆಯ್ಕೆಯಾದರು. ತಾಲೂಕಿನ ಎಲ್ಲ ವಲಯಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ವಲಯ- ಅವಿಲ್ ಡೇಸಾ ಬಂಗಾಡಿ, ಉಮೇಶ್ ಗೌಡ, ಕಕ್ಕಿಂಜೆ -ತಿರುಮಲೇಶ್, ಧರ್ಮಸ್ಥಳ ಸುಮಿತ್ರಾ, ಗೇರುಕಟ್ಟೆ -ಸುರೇಶ್ ಶ್ರೀ ದೇವಿ ಕೃಪಾ, ಕಲ್ಲೇರಿ – ಬಾಲಕೃಷ್ಣ ಶೆಟ್ಟಿ, ವೇಣೂರು -ಜಿನರಾಜ್ ಜೈನ್, ಅಳದಂಗಡಿ , ಪ್ರಭಾಕರ್ ಕುಲಾಲ್, ಸುಲ್ಕೇರಿ -ವಿಜೇತ್, ಮಡಂತ್ಯಾರು -ಲೆಸ್ಲಿ ಡಿಸೋಜ, ಅರಸಿನಮಕ್ಕಿ – ಅಶ್ವಥ್ ನಿಡ್ಲೆ ಆಯ್ಕೆಯಾದರು.

Related posts

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!