July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು.

2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ ಶಾಮಿಯಾನದ ಮಾಲಕ ಕಳಿಯ ಗ್ರಾಮ ಪಂಚಾಯತ್‌ ಸದಸ್ಯ ಬಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಭಾರತ್ ಶಾಮಿಯಾನದ ಧರ್ಣಪ್ಪ ಮೂಲ್ಯ ನಾವೂರು, ಕೋಶಾಧಿಕಾರಿ ಕಾಯರ್ತಡ್ಕ ಅಭಿಲಾಷ್ ಶಾಮಿಯಾನದ ಜೋಸೆಫ್ ಕೆ.ಡಿ. ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಅರುಣ್ ಮೊರಾಸ್ (ಎಸ್.ಪಿ.ಎಸ್. ಶಾಮಿಯಾನ ಮಡಂತ್ಯಾರು), ರಾಜೇಂದ್ರ ಕುಮಾರ್ (ಎಸ್.ಆರ್. ಶಾಮಿಯಾನ ವೇಣೂರು), ಜೊತೆ ಕಾರ್ಯದರ್ಶಿ ಕೆ.ಎಂ. ಹಕೀಮ್ (ತನಲ್ ಇವೆಂಟ್ ಸರಳಿಕಟ್ಟೆ), ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ್ ಕುಮಾರ್ (ಶ್ರೀ ದೇವಿ ಶಾಮಿಯಾನ ಎಸ್.ಎಮ್), ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ (ಎ.ಕೆ.ಎ. ಶಾಮಿಯಾನ ಕಕ್ಕಿಂಜೆ) ಆಯ್ಕೆಯಾದರು. ತಾಲೂಕಿನ ಎಲ್ಲ ವಲಯಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ವಲಯ- ಅವಿಲ್ ಡೇಸಾ ಬಂಗಾಡಿ, ಉಮೇಶ್ ಗೌಡ, ಕಕ್ಕಿಂಜೆ -ತಿರುಮಲೇಶ್, ಧರ್ಮಸ್ಥಳ ಸುಮಿತ್ರಾ, ಗೇರುಕಟ್ಟೆ -ಸುರೇಶ್ ಶ್ರೀ ದೇವಿ ಕೃಪಾ, ಕಲ್ಲೇರಿ – ಬಾಲಕೃಷ್ಣ ಶೆಟ್ಟಿ, ವೇಣೂರು -ಜಿನರಾಜ್ ಜೈನ್, ಅಳದಂಗಡಿ , ಪ್ರಭಾಕರ್ ಕುಲಾಲ್, ಸುಲ್ಕೇರಿ -ವಿಜೇತ್, ಮಡಂತ್ಯಾರು -ಲೆಸ್ಲಿ ಡಿಸೋಜ, ಅರಸಿನಮಕ್ಕಿ – ಅಶ್ವಥ್ ನಿಡ್ಲೆ ಆಯ್ಕೆಯಾದರು.

Related posts

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya
error: Content is protected !!