April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ನಿರಂತರ ಅಧ್ಯಯನದಿಂದ ಜ್ಞಾನವನ್ನು ಪಡೆಯುವುದರೊಂದಿಗೆ ಯಶಸ್ವಿ ಜೀವನದ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ದಿವ್ಯ ಕುಮಾರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ ನಡೆದ ನಾಗರಿಕ ಸೇವೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಎನ್ನುವ ವಿಚಾರದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ಕೊಡುವುದಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವುದಕ್ಕೆ ಪ್ರೋತ್ಸಾಹ ಕೊಡಬೇಕು. ಪತ್ರಿಕೆಗಳನ್ನು ಓದುವ ಮೂಲಕ ಪ್ರಚಲಿತ ವಿಷಯಗಳನ್ನು ತಿಳಿದುಕೊಳ್ಳಬೇಕು. ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಬುದ್ಧಿವಂತಿಕೆಯಿಂದ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕು. ಪ್ರತಿಯೊಬ್ಬನೂ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ತಿಳಿದಿರಬೇಕು. ಆಧುನಿಕ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಶಾಪವಾಗಿ ಪರಿಣಮಿಸದೆ ಅದನ್ನು ಜ್ಞಾನಕ್ಕಾಗಿ ಬಳಸಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ, ಕಲಾಸಂಘದ ಸಂಯೋಜಕರಾದ ರವಿಶಂಕರ್ ಉಪಸ್ಥಿತರಿದ್ದರು.
ಉಪನ್ಯಾಸಕ ದಿನೇಶ್ ಸ್ವಾಗತಿಸಿದರು. ಕುಮಾರಿ ಸೃಜನಿ ಧನ್ಯವಾದವಿತ್ತರು. ವಿದ್ಯಾರ್ಥಿ ಶಾರೋನ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya
error: Content is protected !!