September 6, 2026
Uncategorized

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

ಬೆಳ್ತಂಗಡಿ: ನಿರಂತರತೆಯನ್ನು ಹೊಂದಿ ಮುನ್ನಡೆಯುವುದೇ ವಿಜ್ಞಾನ, ತಂತ್ರಜ್ಞಾನದ ಧ್ಯೇಯವಾಗಿದೆ ಎಂದು ಪುತ್ತೂರು ಫಿಲೋಮಿನಾ ಕಾಲೇಜಿನ ಡೀನ್ ಗೋವಿಂದ ಪ್ರಕಾಶ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ನ ಐಟಿ ಕ್ಲಬ್ ಆಶ್ರಯದಲ್ಲಿ ಜರುಗಿದ ಕ್ವಾಟ್ರಿಕ್ಸ್-2k24‌ ಐಟಿ ಫೆಸ್ಟ್ ನ್ನು ಉದ್ಘಾಟಿಸಿ ಮಾತನಾಡುತ್ತಾ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುವ ಬದಲಾವಣೆಗೆ ಸರಿಯಾಗಿ ಬದಲಾವಣೆ ಹೊಂದದಿದ್ದರೆ ಹಿಂದೆ ಉಳಿಯುವ ಸಾಧ್ಯತೆ ಇದೆ. ಆಧುನಿಕ ಕಾಲದಲ್ಲಿ ಹೆಚ್ಚಿನ ಎಲ್ಲಾ ಅಧ್ಯಯನಗಳು, ಕೆಲಸ ಕಾರ್ಯಗಳು ಕಂಪ್ಯೂಟರನ್ನು ಅವಲಂಬಿಸಿರುವುದರಿಂದ ಎಲ್ಲರೂ ಕಂಪ್ಯೂಟರ್ ಜ್ಞಾನವನ್ನು ಪಡೆಯುವ ಅಗತ್ಯವಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ

ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಐಟಿ ಕ್ಲಬ್ ನ ಅಧ್ಯಕ್ಷ ಪವನ್ ರಾಜ್ ಉಪಸ್ಥಿತರಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆಎನ್ ಸ್ವಾಗತಿಸಿದರು. ಉಪನ್ಯಾಸಕಿ ಕಾಮಾಕ್ಷಿ ಧನ್ಯವಾದವಿತ್ತರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya
error: Content is protected !!