25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

ಬೆಳ್ತಂಗಡಿ: ನಿರಂತರತೆಯನ್ನು ಹೊಂದಿ ಮುನ್ನಡೆಯುವುದೇ ವಿಜ್ಞಾನ, ತಂತ್ರಜ್ಞಾನದ ಧ್ಯೇಯವಾಗಿದೆ ಎಂದು ಪುತ್ತೂರು ಫಿಲೋಮಿನಾ ಕಾಲೇಜಿನ ಡೀನ್ ಗೋವಿಂದ ಪ್ರಕಾಶ್ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ನ ಐಟಿ ಕ್ಲಬ್ ಆಶ್ರಯದಲ್ಲಿ ಜರುಗಿದ ಕ್ವಾಟ್ರಿಕ್ಸ್-2k24‌ ಐಟಿ ಫೆಸ್ಟ್ ನ್ನು ಉದ್ಘಾಟಿಸಿ ಮಾತನಾಡುತ್ತಾ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುವ ಬದಲಾವಣೆಗೆ ಸರಿಯಾಗಿ ಬದಲಾವಣೆ ಹೊಂದದಿದ್ದರೆ ಹಿಂದೆ ಉಳಿಯುವ ಸಾಧ್ಯತೆ ಇದೆ. ಆಧುನಿಕ ಕಾಲದಲ್ಲಿ ಹೆಚ್ಚಿನ ಎಲ್ಲಾ ಅಧ್ಯಯನಗಳು, ಕೆಲಸ ಕಾರ್ಯಗಳು ಕಂಪ್ಯೂಟರನ್ನು ಅವಲಂಬಿಸಿರುವುದರಿಂದ ಎಲ್ಲರೂ ಕಂಪ್ಯೂಟರ್ ಜ್ಞಾನವನ್ನು ಪಡೆಯುವ ಅಗತ್ಯವಿದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ

ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್, ಐಟಿ ಕ್ಲಬ್ ನ ಅಧ್ಯಕ್ಷ ಪವನ್ ರಾಜ್ ಉಪಸ್ಥಿತರಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆಎನ್ ಸ್ವಾಗತಿಸಿದರು. ಉಪನ್ಯಾಸಕಿ ಕಾಮಾಕ್ಷಿ ಧನ್ಯವಾದವಿತ್ತರು. ಕುಮಾರಿ ಅನುಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya
error: Content is protected !!