32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ  ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತರಾಗಿ ಆ.6 ರಂದು ಭೇಟಿ ನೀಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಣ್ಣಿನ ಹರಕೆಯನ್ನು ಸಲ್ಲಿಸಿದ್ದಾರೆ.

ಈ ವೇಳೆ ಸದಾಶಿವರುದ್ರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಸತೀಶ್ಚಂದ್ರ ಸುರ್ಯಗುತ್ತುರವರು ಯಶ್ ದಂಪತಿಯನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎ ಬ್ಯಾಂಕ್ ಅಧ್ಯಕ್ಷ ಮುನಿರಾಜ ಅಜ್ರಿ , ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ.ಮುಂತಾದವರು ಉಪಸ್ಥಿತರಿದ್ದರು.

ಇಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

Related posts

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya
error: Content is protected !!