September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.11: ಮಡಂತ್ಯಾರಿನಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿ’ ಸೋಜ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಸಂಯುಕ್ತ ಕ್ರೈಸ್ತ ಸಂಘಟನೆ ಬೆಳ್ತಂಗಡಿ ವತಿಯಿಂದ ಆ. ೧೧ರಂದು ಸೇಕ್ರೆಡ್ ಹಾರ್ಟ್ ಕಮ್ಯುನಿಟಿ ಹಾಲ್ ಮಡಂತ್ಯಾರುನಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾಗಿ ದ್ವಿತೀಯ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಇವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಥೋಲಿಕ್ ಸಭಾ ಬೆಳ್ತಂಗಡಿ ವಲಯದ ಅಧ್ಯಕ್ಷ ಲೀಯೋ ರೊಡ್ರಿಗಸ್, ಹಾಗೂ ರಾಜಕೀಯ ಸಂಚಾಲಕ ವಿನ್ಸೆಂಟ್ ಡಿ ಸೋಜ ತಿಳಿಸಿದ್ದಾರೆ.

ಅವರು ಆ.6 ರಂದು ಬೆಳ್ತಂಗಡಿ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಆರಂಭದಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರವರನ್ನು ಆಕರ್ಷಕ ಬ್ಯಾಂಡ್ ವಾದ್ಯಗಳೊಂದಿಗೆ ಸ್ವಾಗತಿಸಲಾಗುವುದು. ನಂತರ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ| ಲಾರೆನ್ಸ್ ಮುಕ್ಕುಯಿ ಅವರ ಅಧ್ಯಕ್ಷತೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಥೋಲಿಕ್ ಸಭಾ ಬೆಳ್ತಂಗಡಿ ವಲಯದ ಆಧ್ಯಾತ್ಮಿಕ ನಿರ್ದೇಶಕರು ಹಾಗೂ ಬೆಳ್ತಂಗಡಿ ವಲಯದ ಪ್ರಧಾನ ಗುರುಗಳಾದ ರೆ|ಫಾ| ವಾಲ್ಟರ್ ಡಿ ಮೆಲ್ಲೋ ಭಾಗವಹಿಸಲಿದ್ದಾರೆ. ಬೆಳ್ತಂಗಡಿಯ ಖ್ಯಾತ ವಕೀಲರು ಹಾಗೂ ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್ ಕರ್ನಾಟಕ ರಾಜ್ಯದ ಅಧ್ಯಕ್ಷ ಸೇವಿಯರ್ ಪಾಲೇಲಿ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಲಯದ ಕಥೋಲಿಕ್ ಸಭಾ ಅಧ್ಯಕ್ಷ ಲಿಯೋ ರೊಡ್ರಿಗಸ್, ಆಲ್ವಿನ್ ಡಿಸೋಜಾ ಅಧ್ಯಕ್ಷರು ಕಥೋಲಿಕ್ ಸಭಾ ಕೇಂದ್ರಿಯ ಸಮಿತಿ. ಬಿಟ್ಟಿ ನೆಡುನಿಲಂ, ಅಧ್ಯಕ್ಷರು ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿ, ಕೆ.ಪಿ ಜೋಸೆಫ್ ಕಾರ್ಯದರ್ಶಿ ಐಪಿಸಿ ಚರ್ಚ್ ಬೆಳ್ತಂಗಡಿ, ಜೆರಾಲ್ಡ್ ಮೊರಾಸ್ ಕಾರ್ಯದರ್ಶಿ ಚರ್ಚ್ ಪಾಲನ ಸಮಿತಿ ಬೆಳ್ತಂಗಡಿ ವಲಯ, ಉಪಾಧ್ಯಕ್ಷರು ಚರ್ಚ್ ಪಾಲನಾ ಸಮಿತಿ ಮಡಂತ್ಯಾರು, ಶ್ರೀಮತಿ ಐರಿನ್ ಸಿಕ್ವೆರಾ, ಸ್ತ್ರೀ ಹಿತಾ ಸಂಚಾಲಕಿ ಕಥೋಲಿಕ್ ಸಭಾ ಬೆಳ್ತಂಗಡಿ ವಲಯ, ಪಾಸ್ಟಾರ್ ಅಂತೋನಿ ರೊಡ್ರಿಗಸ್ ನ್ಯೂ ಲೈಫ್ ಫೆಲೋಶಿಪ್ ಮಡಂತ್ಯಾರು ಉಪಸ್ಥಿತರಿದ್ದಾರೆ ಎಂದು ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಮಡಂತ್ಯಾರು ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಮೋರಾಸ್, ಕಥೋಲಿಕ್ ಸಭಾ ಬೆಳ್ತಂಗಡಿ ವಲಯ ಕಾರ್ಯದರ್ಶಿ ಪಿಲಿಪ್ ಡಿ ಕುನ್ಹ, ಐಸಿವೈಎಂ ಬೆಳ್ತಂಗಡಿ ವಲಯ ಅಧ್ಯಕ್ಷ ಸುಪ್ರಿತ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

Related posts

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya
error: Content is protected !!