22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಸಹಾಯಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಪ್ಪ ಎಂ. ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕರಿಸಿದರು.

ಇವರು ಕಳೆದ 31 ವರ್ಷಗಳಿಂದ ಮಂಗಳೂರು ಪಾಂಡೇಶ್ವರ, ಉಪ್ಪಿನಂಗಡಿ, ಮೂಡಬಿದ್ರೆ, ಪುಂಜಾಲಕಟ್ಟೆ, ಬಂಟ್ವಾಳ ಗ್ರಾಮಾಂತರ, ವೇಣೂರು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಬೆಳ್ತಂಗಡಿ ವೃತ್ತ ನಿರೀಕ್ಷರ ಕಚೇರಿಯಲ್ಲಿ 3 ವರ್ಷ, ಬಳಿಕ ನಾಲ್ಕುವರೆ ವರ್ಷಗಳಿಂದ ಬೆಳ್ತಂಗಡಿ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೂಲತಃ ಬೆಳಾಲಿನ ಇವರು ಪ್ರಸ್ತುತ ಧರ್ಮಸ್ಥಳ ಕನ್ಯಾಡಿಯಲ್ಲಿ ಕುಟುಂಬ ಸಹಿತ ವಾಸ್ತವ್ಯ ಇದ್ದಾರೆ.

Related posts

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya
error: Content is protected !!