23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಸಹಾಯಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಪ್ಪ ಎಂ. ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕರಿಸಿದರು.

ಇವರು ಕಳೆದ 31 ವರ್ಷಗಳಿಂದ ಮಂಗಳೂರು ಪಾಂಡೇಶ್ವರ, ಉಪ್ಪಿನಂಗಡಿ, ಮೂಡಬಿದ್ರೆ, ಪುಂಜಾಲಕಟ್ಟೆ, ಬಂಟ್ವಾಳ ಗ್ರಾಮಾಂತರ, ವೇಣೂರು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಬೆಳ್ತಂಗಡಿ ವೃತ್ತ ನಿರೀಕ್ಷರ ಕಚೇರಿಯಲ್ಲಿ 3 ವರ್ಷ, ಬಳಿಕ ನಾಲ್ಕುವರೆ ವರ್ಷಗಳಿಂದ ಬೆಳ್ತಂಗಡಿ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದರು.

ಮೂಲತಃ ಬೆಳಾಲಿನ ಇವರು ಪ್ರಸ್ತುತ ಧರ್ಮಸ್ಥಳ ಕನ್ಯಾಡಿಯಲ್ಲಿ ಕುಟುಂಬ ಸಹಿತ ವಾಸ್ತವ್ಯ ಇದ್ದಾರೆ.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ : ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!