April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು.

2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ ಶಾಮಿಯಾನದ ಮಾಲಕ ಕಳಿಯ ಗ್ರಾಮ ಪಂಚಾಯತ್‌ ಸದಸ್ಯ ಬಿ.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾವೂರು ಭಾರತ್ ಶಾಮಿಯಾನದ ಧರ್ಣಪ್ಪ ಮೂಲ್ಯ ನಾವೂರು, ಕೋಶಾಧಿಕಾರಿ ಕಾಯರ್ತಡ್ಕ ಅಭಿಲಾಷ್ ಶಾಮಿಯಾನದ ಜೋಸೆಫ್ ಕೆ.ಡಿ. ಆಯ್ಕೆಯಾದರು.

ಇತರ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಅರುಣ್ ಮೊರಾಸ್ (ಎಸ್.ಪಿ.ಎಸ್. ಶಾಮಿಯಾನ ಮಡಂತ್ಯಾರು), ರಾಜೇಂದ್ರ ಕುಮಾರ್ (ಎಸ್.ಆರ್. ಶಾಮಿಯಾನ ವೇಣೂರು), ಜೊತೆ ಕಾರ್ಯದರ್ಶಿ ಕೆ.ಎಂ. ಹಕೀಮ್ (ತನಲ್ ಇವೆಂಟ್ ಸರಳಿಕಟ್ಟೆ), ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ್ ಕುಮಾರ್ (ಶ್ರೀ ದೇವಿ ಶಾಮಿಯಾನ ಎಸ್.ಎಮ್), ಕ್ರೀಡಾ ಕಾರ್ಯದರ್ಶಿಯಾಗಿ ಅಶ್ವಥ್ (ಎ.ಕೆ.ಎ. ಶಾಮಿಯಾನ ಕಕ್ಕಿಂಜೆ) ಆಯ್ಕೆಯಾದರು. ತಾಲೂಕಿನ ಎಲ್ಲ ವಲಯಗಳಿಗೆ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಬೆಳ್ತಂಗಡಿ ವಲಯ- ಅವಿಲ್ ಡೇಸಾ ಬಂಗಾಡಿ, ಉಮೇಶ್ ಗೌಡ, ಕಕ್ಕಿಂಜೆ -ತಿರುಮಲೇಶ್, ಧರ್ಮಸ್ಥಳ ಸುಮಿತ್ರಾ, ಗೇರುಕಟ್ಟೆ -ಸುರೇಶ್ ಶ್ರೀ ದೇವಿ ಕೃಪಾ, ಕಲ್ಲೇರಿ – ಬಾಲಕೃಷ್ಣ ಶೆಟ್ಟಿ, ವೇಣೂರು -ಜಿನರಾಜ್ ಜೈನ್, ಅಳದಂಗಡಿ , ಪ್ರಭಾಕರ್ ಕುಲಾಲ್, ಸುಲ್ಕೇರಿ -ವಿಜೇತ್, ಮಡಂತ್ಯಾರು -ಲೆಸ್ಲಿ ಡಿಸೋಜ, ಅರಸಿನಮಕ್ಕಿ – ಅಶ್ವಥ್ ನಿಡ್ಲೆ ಆಯ್ಕೆಯಾದರು.

Related posts

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!