22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿ ಕಾಲೇಜಿನಲ್ಲಿ ಕಲಾ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ನಿರಂತರ ಅಧ್ಯಯನದಿಂದ ಜ್ಞಾನವನ್ನು ಪಡೆಯುವುದರೊಂದಿಗೆ ಯಶಸ್ವಿ ಜೀವನದ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ದಿವ್ಯ ಕುಮಾರಿ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ ನಡೆದ ನಾಗರಿಕ ಸೇವೆಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಎನ್ನುವ ವಿಚಾರದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ಕೊಡುವುದಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವುದಕ್ಕೆ ಪ್ರೋತ್ಸಾಹ ಕೊಡಬೇಕು. ಪತ್ರಿಕೆಗಳನ್ನು ಓದುವ ಮೂಲಕ ಪ್ರಚಲಿತ ವಿಷಯಗಳನ್ನು ತಿಳಿದುಕೊಳ್ಳಬೇಕು. ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಬುದ್ಧಿವಂತಿಕೆಯಿಂದ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕು. ಪ್ರತಿಯೊಬ್ಬನೂ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ತಿಳಿದಿರಬೇಕು. ಆಧುನಿಕ ಎಲೆಕ್ಟ್ರಾನಿಕ್ ಸಾಧನಗಳ ಬಳಕೆ ಶಾಪವಾಗಿ ಪರಿಣಮಿಸದೆ ಅದನ್ನು ಜ್ಞಾನಕ್ಕಾಗಿ ಬಳಸಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ, ಕಲಾಸಂಘದ ಸಂಯೋಜಕರಾದ ರವಿಶಂಕರ್ ಉಪಸ್ಥಿತರಿದ್ದರು.
ಉಪನ್ಯಾಸಕ ದಿನೇಶ್ ಸ್ವಾಗತಿಸಿದರು. ಕುಮಾರಿ ಸೃಜನಿ ಧನ್ಯವಾದವಿತ್ತರು. ವಿದ್ಯಾರ್ಥಿ ಶಾರೋನ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು: ಮೋನಮ್ಮ ನಿಧನ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!