23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ಉಜಿರೆ: 2024 25 ನೇ ಸಾಲಿನ ಮೊದಲನೇ ತಿಂಗಳ ತಿರುಳು ಕಾರ್ಯಕ್ರಮದ ಅಂಗವಾಗಿ ವರ್ಷದ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀಮತಿ ಸೋನಿಯಾ ಯಶೋವರ್ಮ ಆಗಮಿಸಿ ಯಕ್ಷಗಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಯುವರಾಜ ಪೂವಣಿ , ಪಠ್ಯೇತರ ಸಮಿತಿಯ ಸಂಯೋಜಕರು ಡಾ. ಸುಧೀರ್, ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಭೋಜಮ್ಮ, ಕಲಾ ವೈಭವದ ಮುಖ್ಯಸ್ಥರಾದ ತೃಪ್ತ ಜೈನ್, ಕನ್ನಡ ಪ್ರಾಧ್ಯಾಪಕರಾದ ಭವ್ಯಶ್ರೀ, ರಂಗ ತರಬೇತುದಾರರಾದ ಯಶವಂತ್ ಬೆಳ್ತಂಗಡಿ, ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಸಂಸ್ಕೃತ ಪ್ರಾಧ್ಯಾಪಕರಾದ ಶ್ರೇಯಸ್ ಪಾಲಂದೆ, ಹಾಗೂ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಡಾ. ಸುಧೀರ್ ಇವರು ಯಕ್ಷಗಾನ ವಿಶ್ವಗಾನ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಸ್ವಾಗತಿಸಿದರು. ವೇದಿಕೆಯಲ್ಲಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಳೆದ ವರ್ಷದ ಕಾರ್ಯ ಚಟುವಟಿಕೆಯ ಪುಸ್ತಕದ ಬಿಡುಗಡೆ ಕಾರ್ಯಕ್ರಮವನ್ನು ಸೋನಿಯಾ ಯಶವರ್ಮ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಪೂರನ್ ವರ್ಮ ಇವರಿಗೆ ಯಕ್ಷಗಾನ ಹಾಡಿನ ಮೂಲಕ ಸಿಂಚನ ಹಾಗೂ ತಂಡದವರು ಗೌರವ ಸಲ್ಲಿಸಲಾಯಿತು. ಹಾಗೂ ಯಕ್ಷಗಾನದ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ ಧನ್ಯವಾದವನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸುಮಾರು 80 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸೌರವ ಶೆಟ್ಟಿ ನಿರ್ವಹಿಸಿದರು.

Related posts

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya
error: Content is protected !!