July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಮಾತನಾಡಿ, ತಮ್ಮ ಅಧಿಕಾರವಾಧಿಯಲ್ಲಿ ಕಾಲೇಜಿನ ಬೆಳವಣಿಗೆಗೆ ಒತ್ತು ನೀಡಿ ಶ್ರಮಿಸಲಾಗಿದೆ. ಪ್ರಸ್ತುತ ಕಾಲೇಜಿನ ಶಿಕ್ಷಣ ಗುಣಮಟ್ಟ ಉನ್ನತ ದರ್ಜೆಯಲ್ಲಿದ್ದು, ಮತ್ತಷ್ಟು ಬೆಳವಣಿಗೆಗೆ ಪೂರಕವಾಗಿ ಅಭಿವೃದ್ಧಿ ಆಗಲು ಕಾಲೇಜಿನಲ್ಲಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದರು. ಸರ್ವತೋಮುಖ ಬೆಳವಣಿಗೆಗೆ ಕೈಗೊಂಡ ಕಾರ್ಯಕ್ರಮಗಳ ವಾರ್ಷಿಕ ಮಂಡನೆಯನ್ನು ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಸಭೆಯಲ್ಲಿ ಮಂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಮಾತನಾಡಿ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ನಿರಂತರ ಸಹಕಾರ ಮತ್ತು ಶ್ರಮವನ್ನು ಸ್ಮರಿಸಿ ಅಭಿನಂದಿಸಿದರು. ಕಾಲೇಜಿಗೆ ಅತಿ ಅವಶ್ಯವಿರುವ ಬಾವಿಗೆ ರಿಂಗ್ ಅಳವಡಿಕೆಗೆ ಬೇಡಿಕೆ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ವಿದ್ಯಾರ್ಥಿಗಳು ಪರಿಶೀಲಿಸಿ, ಸ್ಥಿತಿಯ ಗಂಭೀರತೆಯನ್ನು ಅರಿತು ಬಾವಿ ರಿಂಗ್ ಅಳವಡಿಕೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ವಿಪುಲ್, ಕಾರ್ಯದರ್ಶಿಯಾಗಿ ರಮಾಶ್ರೀ, ಜತೆ ಕಾರ್ಯದರ್ಶಿಯಾಗಿ ವನಿತಾ, ಖಜಾಂಚಿಯಾಗಿ ಜಿತೇಶ್ ಕೆ ಹಾಗೂ ಕಾರ್ಯಕಾರಿಣಿ ಸಮಿತಿಯಲ್ಲಿ 17 ಮಂದಿ ಸದಸ್ಯರು ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ. ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಅವರು ನೂತನ ಅಧ್ಯಕ್ಷರಾದ ರಾಜೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಸಭೆಯಲ್ಲಿ ಕಾಲೇಜಿನ ದೈಹಿಕ ನಿರ್ದೇಶಕರಾದ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕರಾದ ಡಾ. ಶೈಲೇಶ್, ಗ್ರಂಥಪಾಲಕರಾದ ಪ್ರವೀಣ್ ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕಾರಣಿ ಸಮಿತಿಯ ಸದಸ್ಯ ಸುನಿಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya
error: Content is protected !!