23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಮಾತನಾಡಿ, ತಮ್ಮ ಅಧಿಕಾರವಾಧಿಯಲ್ಲಿ ಕಾಲೇಜಿನ ಬೆಳವಣಿಗೆಗೆ ಒತ್ತು ನೀಡಿ ಶ್ರಮಿಸಲಾಗಿದೆ. ಪ್ರಸ್ತುತ ಕಾಲೇಜಿನ ಶಿಕ್ಷಣ ಗುಣಮಟ್ಟ ಉನ್ನತ ದರ್ಜೆಯಲ್ಲಿದ್ದು, ಮತ್ತಷ್ಟು ಬೆಳವಣಿಗೆಗೆ ಪೂರಕವಾಗಿ ಅಭಿವೃದ್ಧಿ ಆಗಲು ಕಾಲೇಜಿನಲ್ಲಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ ಎಂದರು. ಸರ್ವತೋಮುಖ ಬೆಳವಣಿಗೆಗೆ ಕೈಗೊಂಡ ಕಾರ್ಯಕ್ರಮಗಳ ವಾರ್ಷಿಕ ಮಂಡನೆಯನ್ನು ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಸಭೆಯಲ್ಲಿ ಮಂಡಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಾಧವ ಎಂ ಮಾತನಾಡಿ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ನಿರಂತರ ಸಹಕಾರ ಮತ್ತು ಶ್ರಮವನ್ನು ಸ್ಮರಿಸಿ ಅಭಿನಂದಿಸಿದರು. ಕಾಲೇಜಿಗೆ ಅತಿ ಅವಶ್ಯವಿರುವ ಬಾವಿಗೆ ರಿಂಗ್ ಅಳವಡಿಕೆಗೆ ಬೇಡಿಕೆ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ವಿದ್ಯಾರ್ಥಿಗಳು ಪರಿಶೀಲಿಸಿ, ಸ್ಥಿತಿಯ ಗಂಭೀರತೆಯನ್ನು ಅರಿತು ಬಾವಿ ರಿಂಗ್ ಅಳವಡಿಕೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ವಿಪುಲ್, ಕಾರ್ಯದರ್ಶಿಯಾಗಿ ರಮಾಶ್ರೀ, ಜತೆ ಕಾರ್ಯದರ್ಶಿಯಾಗಿ ವನಿತಾ, ಖಜಾಂಚಿಯಾಗಿ ಜಿತೇಶ್ ಕೆ ಹಾಗೂ ಕಾರ್ಯಕಾರಿಣಿ ಸಮಿತಿಯಲ್ಲಿ 17 ಮಂದಿ ಸದಸ್ಯರು ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ. ನಿಕಟ ಪೂರ್ವ ಅಧ್ಯಕ್ಷರಾದ ಪ್ರಜ್ವಲ್ ಸಂತೋಷ್ ಅವರು ನೂತನ ಅಧ್ಯಕ್ಷರಾದ ರಾಜೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಸಭೆಯಲ್ಲಿ ಕಾಲೇಜಿನ ದೈಹಿಕ ನಿರ್ದೇಶಕರಾದ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕರಾದ ಡಾ. ಶೈಲೇಶ್, ಗ್ರಂಥಪಾಲಕರಾದ ಪ್ರವೀಣ್ ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕಾರಣಿ ಸಮಿತಿಯ ಸದಸ್ಯ ಸುನಿಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ನಿಕಟಪೂರ್ವ ಕಾರ್ಯದರ್ಶಿ ರಮೇಶ್ ಮೂಲ್ಯ ಧನ್ಯವಾದವಿತ್ತರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಜ.19-21: ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya
error: Content is protected !!