ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ. ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಕೋಳಿ ಅಂಕದಲ್ಲಿ ನಿರತರಾಗಿದ್ದ ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ, ಬಾಲಕೃಷ್ಣ ಎಂಬ ಹೆಸರಿನ 5 ಮಂದಿಯನ್ನು ವಶಪಡಿಸಿಕೊಂಡ ಘಟನೆ ಆ.05 ರಂದು ಸಂಜೆ ನಡೆದಿದೆ.

ಸದ್ರಿಯವರ ವಶದಿಂದ ಒಟ್ಟು ನಗದು ರೂ. 5410/- ರೂಪಾಯಿ, 3 ಹುಂಜ ಕೋಳಿಗಳು, 2 ಸಂಖ್ಯೆಯ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ಹಾಗೂ ಸ್ಥಳದಲ್ಲಿದ್ದ 04 ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದು, ಪ್ರಕರಣದ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 58/2024 ಕಲಂ: 87 ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

Leave a Comment

error: Content is protected !!