30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಬಹುಮಾನ ಮೊತ್ತ: ತಾಲೂಕುಮಟ್ಟ ಪ್ರಥಮ 15 ಸಾವಿರ, ದ್ವೀತಿಯ 10 ಸಾವಿರ, ತೃತೀಯ 5 ಸಾವಿರ, ಜಿಲ್ಲಾಮಟ್ಟ ಪ್ರಥಮ 30 ಸಾವಿರ, ದ್ವೀತಿಯ 25 ಸಾವಿರ, ತೃತೀಯ 20 ಸಾವಿರ, ರಾಜ್ಯಮಟ್ಟ ಪ್ರಥಮ 50 ಸಾವಿರ, ದ್ವಿತೀಯ 40 ಸಾವಿರ, ತೃತೀಯ 35 ಸಾವಿರ. ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಮತ್ತು ರೈತ ಮಹಿಳೆಯರು ಕನಿಷ್ಟ ಒಂದು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆದಿದ್ದು ಕಂದಾಯ ಇಲಾಖೆ ಪ್ರಕಾರ ಜಮೀನು ಹೊಂದಿರಬೇಕು ಅಥವಾ ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕರು ಜಮೀನು ಮಾಲಿಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (ಜಿಪಿಎ) ಹೊಂದಿರಬೇಕು, ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!