September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಬಹುಮಾನ ಮೊತ್ತ: ತಾಲೂಕುಮಟ್ಟ ಪ್ರಥಮ 15 ಸಾವಿರ, ದ್ವೀತಿಯ 10 ಸಾವಿರ, ತೃತೀಯ 5 ಸಾವಿರ, ಜಿಲ್ಲಾಮಟ್ಟ ಪ್ರಥಮ 30 ಸಾವಿರ, ದ್ವೀತಿಯ 25 ಸಾವಿರ, ತೃತೀಯ 20 ಸಾವಿರ, ರಾಜ್ಯಮಟ್ಟ ಪ್ರಥಮ 50 ಸಾವಿರ, ದ್ವಿತೀಯ 40 ಸಾವಿರ, ತೃತೀಯ 35 ಸಾವಿರ. ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಮತ್ತು ರೈತ ಮಹಿಳೆಯರು ಕನಿಷ್ಟ ಒಂದು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆದಿದ್ದು ಕಂದಾಯ ಇಲಾಖೆ ಪ್ರಕಾರ ಜಮೀನು ಹೊಂದಿರಬೇಕು ಅಥವಾ ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕರು ಜಮೀನು ಮಾಲಿಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (ಜಿಪಿಎ) ಹೊಂದಿರಬೇಕು, ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!