March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya
error: Content is protected !!