24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಬಹುಮಾನ ಮೊತ್ತ: ತಾಲೂಕುಮಟ್ಟ ಪ್ರಥಮ 15 ಸಾವಿರ, ದ್ವೀತಿಯ 10 ಸಾವಿರ, ತೃತೀಯ 5 ಸಾವಿರ, ಜಿಲ್ಲಾಮಟ್ಟ ಪ್ರಥಮ 30 ಸಾವಿರ, ದ್ವೀತಿಯ 25 ಸಾವಿರ, ತೃತೀಯ 20 ಸಾವಿರ, ರಾಜ್ಯಮಟ್ಟ ಪ್ರಥಮ 50 ಸಾವಿರ, ದ್ವಿತೀಯ 40 ಸಾವಿರ, ತೃತೀಯ 35 ಸಾವಿರ. ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಮತ್ತು ರೈತ ಮಹಿಳೆಯರು ಕನಿಷ್ಟ ಒಂದು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆದಿದ್ದು ಕಂದಾಯ ಇಲಾಖೆ ಪ್ರಕಾರ ಜಮೀನು ಹೊಂದಿರಬೇಕು ಅಥವಾ ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕರು ಜಮೀನು ಮಾಲಿಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (ಜಿಪಿಎ) ಹೊಂದಿರಬೇಕು, ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya
error: Content is protected !!