September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಬಹುಮಾನ ಮೊತ್ತ: ತಾಲೂಕುಮಟ್ಟ ಪ್ರಥಮ 15 ಸಾವಿರ, ದ್ವೀತಿಯ 10 ಸಾವಿರ, ತೃತೀಯ 5 ಸಾವಿರ, ಜಿಲ್ಲಾಮಟ್ಟ ಪ್ರಥಮ 30 ಸಾವಿರ, ದ್ವೀತಿಯ 25 ಸಾವಿರ, ತೃತೀಯ 20 ಸಾವಿರ, ರಾಜ್ಯಮಟ್ಟ ಪ್ರಥಮ 50 ಸಾವಿರ, ದ್ವಿತೀಯ 40 ಸಾವಿರ, ತೃತೀಯ 35 ಸಾವಿರ. ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸುವ ರೈತರು ಮತ್ತು ರೈತ ಮಹಿಳೆಯರು ಕನಿಷ್ಟ ಒಂದು ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಬೆಳೆದಿದ್ದು ಕಂದಾಯ ಇಲಾಖೆ ಪ್ರಕಾರ ಜಮೀನು ಹೊಂದಿರಬೇಕು ಅಥವಾ ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕರು ಜಮೀನು ಮಾಲಿಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (ಜಿಪಿಎ) ಹೊಂದಿರಬೇಕು, ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!