September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ.

ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಗೆ ಹೋಗುವ ರಸ್ತೆ ಅಗೆದು ಹಾಕಿದ ಪರಿಣಾಮ ಕಾರ್ಯನಿರ್ವಹಿಸುವ ಉದ್ಯಮಗಳಿಗೆ ಬೇಕಾದ ವಸ್ತುಗಳನ್ನು ಹಾಗೂ ಸಿದ್ದಗೊಂಡ ವಸ್ತುಗಳನ್ನು ಸಾಗಿಸಲು ಸಮಸ್ಯೆಗಳು ಆಗುತಿದ್ದು, ಅದಲ್ಲದೇ ಚರಂಡಿ ಮುಚ್ಚಿರುವುದರಿಂದ ಮಳೆ ನೀರಿನಿಂದ ಕೆಲಸ ಮಾಡದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಈಗಾಗಲೇ ಜನಪ್ರತಿನಿದಿಗಳಿಗೆ, ಸ್ಥಳೀಯ ಲಾಯಿಲ ಗ್ರಾಮ ಪಂಚಾಯತ್ ಗೆ ಸಮಸ್ಯೆಯ ಬಗ್ಗೆ ದೂರು ನೀಡಿದರೂ ಯಾರೂ ಕೂಡ ಸ್ಪಂದಿಸದೇ ಉದ್ಯಮ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ಬೇಸತ್ತ ಉದ್ದಿಮೆದಾರರು ಇಂಡಸ್ಟ್ರಿಯಲ್ ಎಸ್ಟೇಟ್ ಬಳಿ ಬಹಿರಂಗ ನೋಟೀಸ್ ಎಂಬ ಎಚ್ಚರಿಕೆಯ ನಾಮಫಲಕವನ್ನು ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಧಿಕಾರಿಗಳೇ, ಜನಪ್ರತಿನಿದಿಗಳೇ, ಇಂಜಿನಿಯರ್ ಗಳೇ ನಮ್ಮ ಕೂಗು ಕೇಳುತ್ತಿಲ್ಲವೇ..?, ಇನ್ನು ಎಷ್ಟು ತಿರುಗಬೇಕು ಯಾರಲ್ಲಿ ಹೇಳಬೇಕು ಗೊತ್ತಿಲ್ಲ ನಮ್ಮ ಕುಟುಂಬಕ್ಕೆ ಅನ್ನ ಕೊಡುವ ದಾರಿಯನ್ನೇ ಮುಚ್ಚಿದ್ದೀರಿ. ನಮ್ಮ ತಾಳ್ಮೆ ಪರೀಕ್ಷೀಸುತಿದ್ದೀರಾ ? ಶೀಘ್ರವೇ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ ಮಾಡುವೆವು ಎಂಬ ಫಲಕ ಹಾಕಿರುವುದು ಎಲ್ಲರ ಗಮನ ಸೆಳೆಯುತ್ತಿದೆ.

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!