25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ.

ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಗೆ ಹೋಗುವ ರಸ್ತೆ ಅಗೆದು ಹಾಕಿದ ಪರಿಣಾಮ ಕಾರ್ಯನಿರ್ವಹಿಸುವ ಉದ್ಯಮಗಳಿಗೆ ಬೇಕಾದ ವಸ್ತುಗಳನ್ನು ಹಾಗೂ ಸಿದ್ದಗೊಂಡ ವಸ್ತುಗಳನ್ನು ಸಾಗಿಸಲು ಸಮಸ್ಯೆಗಳು ಆಗುತಿದ್ದು, ಅದಲ್ಲದೇ ಚರಂಡಿ ಮುಚ್ಚಿರುವುದರಿಂದ ಮಳೆ ನೀರಿನಿಂದ ಕೆಲಸ ಮಾಡದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಈಗಾಗಲೇ ಜನಪ್ರತಿನಿದಿಗಳಿಗೆ, ಸ್ಥಳೀಯ ಲಾಯಿಲ ಗ್ರಾಮ ಪಂಚಾಯತ್ ಗೆ ಸಮಸ್ಯೆಯ ಬಗ್ಗೆ ದೂರು ನೀಡಿದರೂ ಯಾರೂ ಕೂಡ ಸ್ಪಂದಿಸದೇ ಉದ್ಯಮ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ಬೇಸತ್ತ ಉದ್ದಿಮೆದಾರರು ಇಂಡಸ್ಟ್ರಿಯಲ್ ಎಸ್ಟೇಟ್ ಬಳಿ ಬಹಿರಂಗ ನೋಟೀಸ್ ಎಂಬ ಎಚ್ಚರಿಕೆಯ ನಾಮಫಲಕವನ್ನು ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಧಿಕಾರಿಗಳೇ, ಜನಪ್ರತಿನಿದಿಗಳೇ, ಇಂಜಿನಿಯರ್ ಗಳೇ ನಮ್ಮ ಕೂಗು ಕೇಳುತ್ತಿಲ್ಲವೇ..?, ಇನ್ನು ಎಷ್ಟು ತಿರುಗಬೇಕು ಯಾರಲ್ಲಿ ಹೇಳಬೇಕು ಗೊತ್ತಿಲ್ಲ ನಮ್ಮ ಕುಟುಂಬಕ್ಕೆ ಅನ್ನ ಕೊಡುವ ದಾರಿಯನ್ನೇ ಮುಚ್ಚಿದ್ದೀರಿ. ನಮ್ಮ ತಾಳ್ಮೆ ಪರೀಕ್ಷೀಸುತಿದ್ದೀರಾ ? ಶೀಘ್ರವೇ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ ಮಾಡುವೆವು ಎಂಬ ಫಲಕ ಹಾಕಿರುವುದು ಎಲ್ಲರ ಗಮನ ಸೆಳೆಯುತ್ತಿದೆ.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya
error: Content is protected !!