23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!