ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಜಿನ ಮಂದಿರದಲ್ಲಿ ಯಜ್ಞೋಪವಿತ ತಯಾರಿಸುವ ತರಬೇತಿ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!