ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀಮದ್ ಭಾಗವತ ಪ್ರವಚನ ಸಪ್ತಾಹವು ಆ 9 ರಿಂದ 15 ರವರೆಗೆ ಪ್ರತಿದಿನ ಸಂಜೆ ಗಂಟೆ 6.00 ರಿಂದ 8.00 ರವರೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.

ಶ್ರೀಮತ್ ಭಾಗವತ ಪ್ರವಚನ ಸಪ್ತಾಹದ ಪ್ರವಚನಕಾರವನ್ನು ವೀಣಾ ಬನ್ನಂಜೆ ನಿರ್ವಹಿಸಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು.ಶರತ್ ಕೃಷ್ಣ ಪಡ್ವೆಟ್ನಾಯ ನೇರವೇರಿಸಲಿದ್ದಾರೆ.

ಸಿ.ಇ.ಓ,ಐ.ಟಿ ಮತ್ತು ಹಾಸ್ಟೆಲ್ ಆಡಳಿತಾಧಿಕಾರಿ,ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ,ಬೆಳ್ತಂಗಡಿ ರಾಘವೇಂದ್ರ ನರ್ಸಿಂಗ್ ಹೋಮ್ ಡಾ.ಜಗನ್ನಾಥ ಗೌರವ ಉಪಸ್ಥಿತರಿರುವರು.

ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿ ಮಹಿಳಾ ಮಂಡಲ ಉಜಿರೆ,ತುಳು ಶಿವಳ್ಳಿ ಮಹಾಸಭಾ ಬೆಳ್ತಂಗಡಿ ತಾಲೂಕು,ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ,ಲಯನ್ಸ್ ಕ್ಲಬ್ ಬೆಳ್ತಂಗಡಿ, ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಘ ಸಂಸ್ಥೆಗಳು ಕಾರ್ಯಕ್ರಮಕ್ಕೆ ಸಹಕರಿಸಲಿದ್ದಾರೆ.

Leave a Comment

error: Content is protected !!