July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲ್ಕೆ ಎಂಬಲ್ಲಿನ ಗುಡ್ಡೆಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ, ಧರ್ಮಸ್ಥಳ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಕಿಶೋರ್ ಪಿ. ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದು, ಈ ವೇಳೆ ಕೋಳಿ ಅಂಕದಲ್ಲಿ ನಿರತರಾಗಿದ್ದ ದೇವಪ್ಪ, ಉಮ್ಮನ ಗೌಡ, ಪರಮೇಶ್ವರ, ರಾಮಣ್ಣ, ಬಾಲಕೃಷ್ಣ ಎಂಬ ಹೆಸರಿನ 5 ಮಂದಿಯನ್ನು ವಶಪಡಿಸಿಕೊಂಡ ಘಟನೆ ಆ.05 ರಂದು ಸಂಜೆ ನಡೆದಿದೆ.

ಸದ್ರಿಯವರ ವಶದಿಂದ ಒಟ್ಟು ನಗದು ರೂ. 5410/- ರೂಪಾಯಿ, 3 ಹುಂಜ ಕೋಳಿಗಳು, 2 ಸಂಖ್ಯೆಯ ಕೋಳಿ ಅಂಕಕ್ಕೆ ಬಳಸುವ ಕತ್ತಿಗಳನ್ನು ಹಾಗೂ ಸ್ಥಳದಲ್ಲಿದ್ದ 04 ದ್ವಿಚಕ್ರ ವಾಹನಗಳನ್ನು ಸ್ವಾಧೀನ ಪಡೆಸಿಕೊಂಡಿದ್ದು, ಪ್ರಕರಣದ ಬಗ್ಗೆ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 58/2024 ಕಲಂ: 87 ಕರ್ನಾಟಕ ಪೊಲೀಸ್‌ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya
error: Content is protected !!