25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ.

ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಗೆ ಹೋಗುವ ರಸ್ತೆ ಅಗೆದು ಹಾಕಿದ ಪರಿಣಾಮ ಕಾರ್ಯನಿರ್ವಹಿಸುವ ಉದ್ಯಮಗಳಿಗೆ ಬೇಕಾದ ವಸ್ತುಗಳನ್ನು ಹಾಗೂ ಸಿದ್ದಗೊಂಡ ವಸ್ತುಗಳನ್ನು ಸಾಗಿಸಲು ಸಮಸ್ಯೆಗಳು ಆಗುತಿದ್ದು, ಅದಲ್ಲದೇ ಚರಂಡಿ ಮುಚ್ಚಿರುವುದರಿಂದ ಮಳೆ ನೀರಿನಿಂದ ಕೆಲಸ ಮಾಡದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಈಗಾಗಲೇ ಜನಪ್ರತಿನಿದಿಗಳಿಗೆ, ಸ್ಥಳೀಯ ಲಾಯಿಲ ಗ್ರಾಮ ಪಂಚಾಯತ್ ಗೆ ಸಮಸ್ಯೆಯ ಬಗ್ಗೆ ದೂರು ನೀಡಿದರೂ ಯಾರೂ ಕೂಡ ಸ್ಪಂದಿಸದೇ ಉದ್ಯಮ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ಬೇಸತ್ತ ಉದ್ದಿಮೆದಾರರು ಇಂಡಸ್ಟ್ರಿಯಲ್ ಎಸ್ಟೇಟ್ ಬಳಿ ಬಹಿರಂಗ ನೋಟೀಸ್ ಎಂಬ ಎಚ್ಚರಿಕೆಯ ನಾಮಫಲಕವನ್ನು ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಧಿಕಾರಿಗಳೇ, ಜನಪ್ರತಿನಿದಿಗಳೇ, ಇಂಜಿನಿಯರ್ ಗಳೇ ನಮ್ಮ ಕೂಗು ಕೇಳುತ್ತಿಲ್ಲವೇ..?, ಇನ್ನು ಎಷ್ಟು ತಿರುಗಬೇಕು ಯಾರಲ್ಲಿ ಹೇಳಬೇಕು ಗೊತ್ತಿಲ್ಲ ನಮ್ಮ ಕುಟುಂಬಕ್ಕೆ ಅನ್ನ ಕೊಡುವ ದಾರಿಯನ್ನೇ ಮುಚ್ಚಿದ್ದೀರಿ. ನಮ್ಮ ತಾಳ್ಮೆ ಪರೀಕ್ಷೀಸುತಿದ್ದೀರಾ ? ಶೀಘ್ರವೇ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ ಮಾಡುವೆವು ಎಂಬ ಫಲಕ ಹಾಕಿರುವುದು ಎಲ್ಲರ ಗಮನ ಸೆಳೆಯುತ್ತಿದೆ.

Related posts

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya
error: Content is protected !!