September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ.

ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಗೆ ಹೋಗುವ ರಸ್ತೆ ಅಗೆದು ಹಾಕಿದ ಪರಿಣಾಮ ಕಾರ್ಯನಿರ್ವಹಿಸುವ ಉದ್ಯಮಗಳಿಗೆ ಬೇಕಾದ ವಸ್ತುಗಳನ್ನು ಹಾಗೂ ಸಿದ್ದಗೊಂಡ ವಸ್ತುಗಳನ್ನು ಸಾಗಿಸಲು ಸಮಸ್ಯೆಗಳು ಆಗುತಿದ್ದು, ಅದಲ್ಲದೇ ಚರಂಡಿ ಮುಚ್ಚಿರುವುದರಿಂದ ಮಳೆ ನೀರಿನಿಂದ ಕೆಲಸ ಮಾಡದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಈಗಾಗಲೇ ಜನಪ್ರತಿನಿದಿಗಳಿಗೆ, ಸ್ಥಳೀಯ ಲಾಯಿಲ ಗ್ರಾಮ ಪಂಚಾಯತ್ ಗೆ ಸಮಸ್ಯೆಯ ಬಗ್ಗೆ ದೂರು ನೀಡಿದರೂ ಯಾರೂ ಕೂಡ ಸ್ಪಂದಿಸದೇ ಉದ್ಯಮ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ಬೇಸತ್ತ ಉದ್ದಿಮೆದಾರರು ಇಂಡಸ್ಟ್ರಿಯಲ್ ಎಸ್ಟೇಟ್ ಬಳಿ ಬಹಿರಂಗ ನೋಟೀಸ್ ಎಂಬ ಎಚ್ಚರಿಕೆಯ ನಾಮಫಲಕವನ್ನು ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಧಿಕಾರಿಗಳೇ, ಜನಪ್ರತಿನಿದಿಗಳೇ, ಇಂಜಿನಿಯರ್ ಗಳೇ ನಮ್ಮ ಕೂಗು ಕೇಳುತ್ತಿಲ್ಲವೇ..?, ಇನ್ನು ಎಷ್ಟು ತಿರುಗಬೇಕು ಯಾರಲ್ಲಿ ಹೇಳಬೇಕು ಗೊತ್ತಿಲ್ಲ ನಮ್ಮ ಕುಟುಂಬಕ್ಕೆ ಅನ್ನ ಕೊಡುವ ದಾರಿಯನ್ನೇ ಮುಚ್ಚಿದ್ದೀರಿ. ನಮ್ಮ ತಾಳ್ಮೆ ಪರೀಕ್ಷೀಸುತಿದ್ದೀರಾ ? ಶೀಘ್ರವೇ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ ಮಾಡುವೆವು ಎಂಬ ಫಲಕ ಹಾಕಿರುವುದು ಎಲ್ಲರ ಗಮನ ಸೆಳೆಯುತ್ತಿದೆ.

Related posts

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya
error: Content is protected !!