25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

ಬೆಳ್ತಂಗಡಿ: ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿಯಲ್ಲಿರುವ ಇಂಡಸ್ಟ್ರಿಯಲ್ ಎಸ್ಟೇಟ್ ನ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ ಹಾಕಿದ ಘಟನೆ ನಡೆದಿದೆ.

ಕಳೆದ ಕೆಲವು ಸಮಯಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಗೆ ಹೋಗುವ ರಸ್ತೆ ಅಗೆದು ಹಾಕಿದ ಪರಿಣಾಮ ಕಾರ್ಯನಿರ್ವಹಿಸುವ ಉದ್ಯಮಗಳಿಗೆ ಬೇಕಾದ ವಸ್ತುಗಳನ್ನು ಹಾಗೂ ಸಿದ್ದಗೊಂಡ ವಸ್ತುಗಳನ್ನು ಸಾಗಿಸಲು ಸಮಸ್ಯೆಗಳು ಆಗುತಿದ್ದು, ಅದಲ್ಲದೇ ಚರಂಡಿ ಮುಚ್ಚಿರುವುದರಿಂದ ಮಳೆ ನೀರಿನಿಂದ ಕೆಲಸ ಮಾಡದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಈಗಾಗಲೇ ಜನಪ್ರತಿನಿದಿಗಳಿಗೆ, ಸ್ಥಳೀಯ ಲಾಯಿಲ ಗ್ರಾಮ ಪಂಚಾಯತ್ ಗೆ ಸಮಸ್ಯೆಯ ಬಗ್ಗೆ ದೂರು ನೀಡಿದರೂ ಯಾರೂ ಕೂಡ ಸ್ಪಂದಿಸದೇ ಉದ್ಯಮ ಬಂದ್ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದರಿಂದ ಬೇಸತ್ತ ಉದ್ದಿಮೆದಾರರು ಇಂಡಸ್ಟ್ರಿಯಲ್ ಎಸ್ಟೇಟ್ ಬಳಿ ಬಹಿರಂಗ ನೋಟೀಸ್ ಎಂಬ ಎಚ್ಚರಿಕೆಯ ನಾಮಫಲಕವನ್ನು ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅಧಿಕಾರಿಗಳೇ, ಜನಪ್ರತಿನಿದಿಗಳೇ, ಇಂಜಿನಿಯರ್ ಗಳೇ ನಮ್ಮ ಕೂಗು ಕೇಳುತ್ತಿಲ್ಲವೇ..?, ಇನ್ನು ಎಷ್ಟು ತಿರುಗಬೇಕು ಯಾರಲ್ಲಿ ಹೇಳಬೇಕು ಗೊತ್ತಿಲ್ಲ ನಮ್ಮ ಕುಟುಂಬಕ್ಕೆ ಅನ್ನ ಕೊಡುವ ದಾರಿಯನ್ನೇ ಮುಚ್ಚಿದ್ದೀರಿ. ನಮ್ಮ ತಾಳ್ಮೆ ಪರೀಕ್ಷೀಸುತಿದ್ದೀರಾ ? ಶೀಘ್ರವೇ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ ಮಾಡುವೆವು ಎಂಬ ಫಲಕ ಹಾಕಿರುವುದು ಎಲ್ಲರ ಗಮನ ಸೆಳೆಯುತ್ತಿದೆ.

Related posts

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya
error: Content is protected !!