28.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ ಗ್ರಾಮದ ಪೊದುಂಬಿಲ ನಾರಿಯದಲ್ಲಿ ವಾಸವಿರುವ ವೆಂಕಪ್ಪ ಹಾಗೂ ಸುಶೀಲರವರ ಮಗಳು ಕುಮಾರಿ ವೇದಾವತಿಯವರು ವಾಹನ ಅಪಘಾತದಲ್ಲಿ ಗಾಯಗೊಂಡಿದ್ದು ಎರಡು ಕಾಲಿನ ಸ್ವಾಧೀನತೆಯನ್ನು ಕಳೆದುಕೊಂಡು ಮಲಗಿದಲ್ಲಿಯೇ ಇರುತ್ತಾರೆ. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಾಗಿದ್ದು, ಸಂಪೂರ್ಣ ಸುರಕ್ಷಾ ಕ್ರಿಟಿಕಲ್ ಇಲ್ನೆಸ್ ಫಂಡ್ ಮುಖಾಂತರ ಧರ್ಮಸ್ಥಳದ ಪೂಜ್ಯರು ಮಂಜೂರು ಮಾಡಿರುವ ಸಹಾಯಧನ ರೂ.20 ಸಾವಿರ ರೂಪಾಯಿಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಗೌಡ ಬಜಿಲ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೇವತಿ, ಒಕ್ಕೂಟದ ನೂತನ ಅಧ್ಯಕ್ಷರಾದ ರಾಜೇಶ್ ಗೌಡ ಬಜಿಲ, ಒಕ್ಕೂಟದ ಪದಾಧಿಕಾರಿಗಳಾದ ಶ್ರೀಮತಿ ಆಲಿಷಾ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವೀಣಾ ರವರು ಉಪಸ್ಥಿತರಿದ್ದರು.

Related posts

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!