30.6 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

ಉಜಿರೆ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ, ರೋಟರಿ ಕ್ಲಬ್ಬೆಳ್ತಂಗಡಿ, ಎಸ್.ಡಿ.ಎಂ.ಕಾಲೇಜು ಎನ್.ಎಸ್.ಎಸ್ ಘಟಕ, ತಾಲೂಕು ಪತ್ರಕರ್ತರ ಸಂಘ ಮತ್ತಿತರರು ಸಂಘಟನೆಗಳ ಜಂಟಿ ಆಶ್ರಯದಲ್ಲಿ ಆ.18ರಂದು ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಕೆ.ಮೋಹನ್ ಕುಮಾರ್ ತಿಳಿಸಿದ್ದಾರೆ.

ಅವರು ಆ.8ರಂದು ಉಜಿರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.5 ವರ್ಷಗಳ ಹಿಂದೆ ಚಾರ್ಮಾಡಿಯಲ್ಲಿ ಬಂದ ಪ್ರವಾಹದ ಸಂದರ್ಭದಲ್ಲಿ ಹಾನಿಯಾದ ಕುಟುಂಬದವರ ಬದುಕು ಕಟ್ಟಲು ಹುಟ್ಟಿಕೊಂಡ ಬದುಕು ಕಟ್ಟೋಣ ಬನ್ನಿ ತಂಡ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಇತರ ಸಂಘಟನೆಯೊಂದಿಗೆ ಸೇರಿಕೊಂಡು ನಡೆಸುತ್ತಿದೆ ಎಂದರು. ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಆ.18ರಂದು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಇದರಲ್ಲಿ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನದ ಕುರಿತು ಪ್ರೇರಣೆ ನೀಡುವ ಕಾರ್ಯ ಮಾಡಲಾಗುವುದು ಎಂದು ವಿವರಿಸಿದರು

ರಕ್ತದಾನದ ಬಗ್ಗೆ ಪ್ರೇರಣೆ:

ರೋಟರಿ ಕ್ಲಬ್‌ ಅಧ್ಯಕ್ಷ ಪೂರನ್ ವರ್ಮ ಮಾತನಾಡಿ ಈ ಬಾರಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದ ಕೊರತೆ ಇದ್ದು ಇಂತಹ ಶಿಬಿರದ ಮೂಲಕ ರಕ್ತದಾನದ ಬಗ್ಗೆ ಪ್ರೇರಣೆ ನೀಡುವ ಕೆಲಸ ಮಾಡಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌.ಡಿ.ಎಂ ಕಾಲೇಜು ಎನ್‌.ಎಸ್‌.ಎಸ್ ಘಟಕದ ಮುಖ್ಯಸ್ಥ ಮಹೇಶ್‌, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತೇಶ್‌ ಇಳಂತಿಲ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಾಜಿ ಕಾರ್ಯದರ್ಶಿ ಶ್ರೀಧರ ಕೆ.ವಿ., ಉಪಸ್ಥಿತರಿದ್ದರು.

Related posts

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya
error: Content is protected !!