May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಇಂದಬೆಟ್ಟು ಗ್ರಾಮ ಪಂಚಾಯತಿನ 2024-2025 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಇಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ರವರು ನಡೆಸಿಕೊಟ್ಟರು.

ದೇವನಾರಿ ಶಾಲಾ ಮಕ್ಕಳು ನಾಡಗೀತೆ ಹಾಡಿದರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ, ನಿಕಟಪೂರ್ವ ಅಧ್ಯಕ್ಷರಾದ ಅನಂದ ಅಡಿಲು, ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು, ವೀರಪ್ಪ ಮೊಯ್ಲಿ, ಸುಮಿತ್ರಾ, ಹರಿಣಾಕ್ಷಿ, ಸೌಮ್ಯ, ಜಯಂತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಗ್ರಾಮದ ಅಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಜಮಾ ಖರ್ಚಿನ ವಿವರ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸ್ವಾಗತಿಸಿ ವರದಿ ಮಂಡಿಸಿದರು. ರಾಷ್ಟ್ರಗೀತೆ ಯೊಂದಿಗೆ ಗ್ರಾಮ ಸಭೆಯನ್ನು ಮುಕ್ತಾಯಗೊಂಡಿತ್ತು.

Related posts

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!