24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

ಉಜಿರೆ : ಪ್ರಸಕ್ತ ವರ್ಷದಲ್ಲಿ ಅಖಿಲ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ. ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಸಿ.ಎ ಅಶ್ವಥ್, ಸಿ.ಎ ಸುಕನ್ಯಾ ಕಾಮತ್, ಸಿ.ಎ ಕೇಶವ್ ಕಾಮತ್, ಮತ್ತು ಸಿ.ಎ ಮೆಘೇಶ್ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಗುರಿ, ಪರಿಶ್ರಮ ದಿಂದ ಸಾಧನೆಯನ್ನು ಮಾಡಬಹುದು. ಅದೇ ರೀತಿ ಸೋತಾಗ ಆತ್ಮ ವಿಶ್ವಾಸ ಕಳೆದು ಕೊಳ್ಳಬಾರದು ಎಂದು ಸಿ.ಎ ಸಾಧಕ ಹಿರಿಯ ವಿದ್ಯಾರ್ಥಿಗಳು ಈಗಿನ ಪಿಯುಸಿಯ ಸಿ.ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಆಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಇವರು ಸಾಧಕರನ್ನು ಸನ್ಮಾನಿಸಿ ಶುಭ ಹಾರೈಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಾದ ಭಾರ್ಗವಿ ಭಟ್ ನಿರೂಪಿಸಿ , ಕೃತಿ ವಂದಿಸಿದರು.

Related posts

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!