26.5 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ-ದೇಶಸೇವೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದ್ದು: ನಿವೃತ್ತ ನೌಕಾದಳ ಸೇನಾನಿ ಶ್ರೀಕೃಷ್ಣ ಭಟ್

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!