28 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya
error: Content is protected !!