May 6, 2026
Uncategorized

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ರಿ ಬೆಳ್ತಂಗಡಿ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಕೊಲ್ಪದಬೈಲು ಎಸ್.ಕೆ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾಸಭೆಗೆ ಜಿಲ್ಲಾ ಸಂಘದ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಯಾದ ಬೆನೆಟ್ ಡಿಸಿಲ್ವಾ, ವಕೀಲರಾದ ಮನೋಹರ್ ಕುಮಾರ್, ಸುಪ್ರೀಂ ಡೆಕೋರಟರ್ಸ್ ನ ಮಾಲಕರು ಅಥಿತಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿರುವ ಅಥಿತಿಗಳಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.

ವೇದಿಕೆಯಲ್ಲಿ ತಾಲೂಕು ಶಾಮಿಯಾನ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್, ನಾರಾಯಣ ಗೌಡ, ತಾಲೂಕು ಕ್ರೀಡಾ ಅಧ್ಯಕ್ಷರಾಗಿ ಮಹಮ್ಮದ್ ಸಮೀರ್ ತಾಲೂಕು ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಶಬೀರ್ ಹಾಜರಿದ್ದರು. ಕಾರ್ಯದರ್ಶಿ ವಸಂತ ಇವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮಾತು ಕುಟ್ಟಿ ಲೆಕ್ಕಾಚಾರ ಮಂಡಿಸಿದರು. ಸಂಘದ ಸದಸ್ಯರಿಗೆ ಪೋಸ್ಟಲ್ ಇನ್ಸೂರೆನ್ಸ್ ಮಾಡಲು ಪೋಸ್ಟ್ ಆಫೀಸ್ ನ ಅಧಿಕಾರಿಗಳು ಹಾಜರಿದ್ದರು.

2024-25 ನೇ ಸಾಲಿಗೆ ಹಿಂದಿನ ಸಮಿತಿಯನ್ನು ಮುಂದುವರೆಸಲಾಯಿತು. ಹೊಸದಾಗಿ ಕಾರ್ಯದರ್ಶಿಯಾಗಿ ಅಖಿಲ್ ಮೋಹನ ಆಯ್ಕೆಯಾದರು. ಮಾತು ಕುಟ್ಟಿ ಸ್ವಾಗತ ಕೋರಿದರು, ಉಪಾಧ್ಯಕ್ಷ ಜೋಸೆಫ್ ಕೆ ಡಿ ಧನ್ಯವಾದವಿತ್ತರು.

Related posts

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya
error: Content is protected !!