27 C
ಪುತ್ತೂರು, ಬೆಳ್ತಂಗಡಿ
June 21, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು.

ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ವಿಟ್ಲ ಇಲ್ಲಿಯ ತೋಟಗಾರಿಕೆ ವಿಜ್ಞಾನಿ ಡಾ. ಭವಿಷ್ಯ ಇವರು ಅಡಿಕೆಯ ವಿವಿಧ ಪ್ರಚಲಿತ ತಳಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರಸಾವರಿ ಪದ್ಧತಿಗಳು, ಮುಖ್ಯ ರೋಗ ಹಾಗೂ ಕೀಟಗಳ ಹತೋಟಿ ವಿಧಾನದ ಬಗ್ಗೆ ಪೂರ್ವಾಹ್ನ ಉಪನ್ಯಾಸ ನೀಡಿದರು.

ಅಪರಾಹ್ನದ ಅವಧಿಯಲ್ಲಿ ಅಡಿಕೆಯಲ್ಲಿ ಅಂತರ ಬೆಳೆಗಳಾಗಿ ಕರಿಮೆಣಸು ಹಾಗೂ ಕೋಕೋ ಬೆಳೆಗಳ ಬಗ್ಗೆ ಪ್ರಗತಿಪರ ರೈತರಾದ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ವಿಷಯ ಮಂಡನೆ ಮಾಡಿದರು.

ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಒಟ್ಟು 53 ಜನ ರೈತ ಬಾಂಧವರು ಭಾಗವಹಿಸಿದ್ದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!