May 6, 2026
ಗ್ರಾಮಾಂತರ ಸುದ್ದಿ

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ


ಬೆಳ್ತಂಗಡಿ : ಕಳಿಯ ಗ್ರಾಮದ ದೇರ್ಜಾಲು ರಸ್ತೆ ಭಾರೀ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ತುಂಬಾ ಹದಗೆಟ್ಟಿದೆ. ಪಂಚಾಯತ್ ಮತ್ತು ಖಾಸಗಿ ರಸ್ತೆಯೆಂದು ಮುಸುಕಿನ ಗುದ್ದಾಟದಲ್ಲಿ ಹದಗೆಟ್ಟ ಕೆಸರಿನಲ್ಲಿ ಓಡಾಡುವುದಕ್ಕೆ ಭಾರೀ ತೊಂದರೆ ಅಗುತ್ತದೆ.

ಕೆಲವು ವರ್ಷಗಳ ಹಿಂದೆ ಗ್ರಾಮ ಪಂಚಾಯತ್ ವತಿಯಿಂದ ವರ್ಷಕ್ಕೊಮ್ಮೆ ಚರಂಡಿ ರಿಪೇರಿ ಮತ್ತು ರಸ್ತೆಯ ನಿರ್ವಹಣೆ ಆಗುತ್ತಿತ್ತು. ವರ್ಷಗಳ ನಂತರ ರಸ್ತೆಯನ್ನು ಖಾಸಗಿ ರಸ್ತೆಯಾಗಿ ಮಾಡಬೇಕೆಂದು ಕಳಿಯ ಗ್ರಾಮ ಪಂಚಾಯತ್ ಗೆ ಓರ್ವ ವ್ಯಕ್ತಿ ಹತ್ತಾರು ಮನೆಯವರ ಸಹಿ ಸಂಗ್ರಹಿಸಿ ಮನವಿಯನ್ನು ಪಂಚಾಯತ್ ಗೆ ನೀಡಿದರು ಎಂದು ತಿಳಿದು ಬಂದಿದೆ. ಆದರೂ ಮೂರ್ನಾಲ್ಕು ಮನೆಯವರು

ಸೇರಿಕೊಂಡು ಸ್ವಂತ ಖರ್ಚಿನಲ್ಲಿ ರಸ್ತೆಯ ನಿರ್ವಹಣೆ ಮಾಡಿ ಕೊಂಡು ಬಂದಿದ್ದಾರೆ. ಈಗಾಗಲೇ ಸ್ವಂತ ಖರ್ಚಿನಲ್ಲಿ 3 ಪೀಕಪ್ ಜಲ್ಲಿ ಹುಡಿ ಹಾಕಿದರೂ ಇತ್ತೀಚಿನ ಭಾರೀ ಮಳೆಯ ಅನಾಹುತಕ್ಕೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ.
ಅದುದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ,ಅನಾರೋಗ್ಯ ಬಾಧಿತರಿಗೆ ಮತ್ತು ವಾಹನ ಸಂಚಾರಕ್ಕೆ ಪದೆ,ಪದೆ ಸಮಸ್ಯೆಯಾಗುತ್ತಿದೆ.
ಪಂಚಾಯತ್ ಜನಪ್ರತಿ ನಿಧಿಗಳು, ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸ ಬೇಕು. ಹಾಗೂ ಸಾರ್ವಜನಿಕ ಹದಗೆಟ್ಟ ರಸ್ತೆ ಸಮಸ್ಯೆಗೆ ಮುಕ್ತಿ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya
error: Content is protected !!